
ಒಡಿಶಾ(ಜ.09):ಮೊಬೈಲ್ ಕದ್ದಿದ್ದಾರೆ ಎನ್ನುವ ಆರೋಪದಲ್ಲಿ ಅಂಗವಿಕಲ ವ್ಯಕ್ತಿಯೊಬ್ಬರಿಗೆ ಒಡಿಶಾದ ಭುವನೇಶ್ವರ ರೈಲ್ವೇ ಪೊಲೀಸರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೊ ವೈರಲ್ ಆಗಿದೆ.
ಇಲ್ಲಿನ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕರೊಬ್ಬರು ಅಂಗವಿಕಲ ವ್ಯಕ್ತಿಗೆ ಥಳಿಸುತ್ತಿರುವುದನ್ನು ಮೊಬೈಲ್ನಲ್ಲಿ ಚಿತ್ರಿಕರಿಸಿ ಯೂಟೂಬ್ಗೆ ಅಪ್ಲೋಡ್ ಮಾಡಿದ್ದಾರೆ. ಅಂಗವಿಕಲ ವ್ಯಕ್ತಿ ಎಂಬುದನ್ನು ಮರೆತ ರೈಲ್ವೆ ಪೊಲೀಸರು ಅಸಹಾಯಕನ ಎದೆಗೆ, ಬೆನ್ನಿಗೆ ಬೂಟಿನ ಕಾಲಿನಲ್ಲಿ ಹಿಗ್ಗಾಮುಗ್ಗಾ ಥಳಿಸುವ ಮೂಲಕ ರಾಕ್ಷಸರಂತೆ ವರ್ತಿಸಿದ್ದಾರೆ.
ಪೊಲೀಸರ ಈ ಕೃತ್ಯಕ್ಕೆ ದೇಶದೆಲ್ಲಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.