
ಕೊಯಮತ್ತೂರು(ಜು.31): ತಮಿಳು ಟಿವಿಯೊಂದರ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಸ್ಲಂ ವಾಸಿಗಳ ಭಾವನೆಗೆ ಧಕ್ಕೆಯುಂಟಾಗುವ ಹೇಳಿಕೆ ನೀಡಿರುವುದಾಗಿ ಆಪಾದಿಸಲಾಗಿದೆ. ಈ ಸಂಬಂಧ ಖಾಸಗಿ ಟಿವಿ ವಾಹಿನಿ ‘ಸ್ಟಾರ್ ವಿಜಯ್’ ಹಾಗೂ ಕಾರ್ಯಕ್ರಮದ ನಿರೂಪಕ, ನಟ ಕಮಲ್ ಹಾಸನ್ ವಿರುದ್ಧ ದಲಿತ ಪಕ್ಷ ‘ಪುದಿಯ ತಮಿಳಗಂ’ ಕಾನೂನು ನೋಟಿಸ್ ಜಾರಿಗೊಳಿಸಿದೆ.
ನೋಟಿಸ್ ಸ್ವೀಕರಿಸಿದ ಏಳು ದಿನಗಳಲ್ಲಿ ನಟ ಮತ್ತು ಟಿವಿ ವಾಹಿನಿ ಬೇಷರತ್ ಕ್ಷಮೆಯಾಚಿಸದಿದ್ದಲ್ಲಿ, 100 ಕೋಟಿ ರು. ಮಾನನಷ್ಟ ಪಾವತಿಸುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಗಾಯತ್ರಿ ರಘು ರಾಮನ್ ತಮ್ಮ ಸಹನಟನ ಬಗ್ಗೆ ಹೇಳುವಾಗ, ಅವರ ವರ್ತನೆ ಸ್ಲಂ ವಾಸಿಗಳಂತಿದೆ ಎಂದಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.