ಅಮ್ಮಾ ಸಾವಿನ ಸುದ್ದಿ ಕೇಳಿ ಮೃತಪಟ್ಟವರಿಗೆ ಎಐಎಡಿಎಂಕೆಯಿಂದ ಪರಿಹಾರ

Published : Dec 10, 2016, 10:44 AM ISTUpdated : Apr 11, 2018, 01:05 PM IST
ಅಮ್ಮಾ ಸಾವಿನ ಸುದ್ದಿ ಕೇಳಿ ಮೃತಪಟ್ಟವರಿಗೆ ಎಐಎಡಿಎಂಕೆಯಿಂದ ಪರಿಹಾರ

ಸಾರಾಂಶ

ಚನ್ನೈನಲ್ಲಿ ಜಯಲಲಿತಾ ಸ್ಮಾರಕ ನಿರ್ಮಿಸಲು 15 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಚೆನ್ನೈ(ಡಿ.10): ಇತ್ತೀಚೆಗಷ್ಟೇ ಮೃತಪಟ್ಟ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಸುದ್ದಿ ಕೇಳಿ 280 ಜನರು ಶಾಕ್'ನಿಂದ ಸಾವಿಗೀಡಾಗಿದ್ದರು. ಅದರಲ್ಲಿ 203 ಜನರು ಅಮ್ಮಾ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿಗಳನ್ನು ಎಐಎಡಿಎಂಕೆ ಪಕ್ಷ ಘೋಷಿಸಿದೆ.

ಇದೇವೇಳೆ ಆತ್ಮಹತ್ಯೆಗೆ ಯತ್ನಿಸಿದ 77 ಪಕ್ಷದ ಕಾರ್ಯಕರ್ತರ ಕುಟುಂಬಗಳಿಗೂ ಎಐಎಡಿಎಂಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ. ಶೀಘ್ರದಲ್ಲಿಯೇ ಮೃತರ ಕುಟುಂಬಗಳಿಗೆ ಪರಿಹಾರ ಲಭ್ಯವಾಗಲಿದೆ ಎಂದು ರಾಜ್ಯಸರ್ಕಾರದ ಉನ್ನತಮೂಲಗಳು ತಿಳಿಸಿವೆ.

ಇದೇವೇಳೆ ಚನ್ನೈನಲ್ಲಿ ಜಯಲಲಿತಾ ಸ್ಮಾರಕ ನಿರ್ಮಿಸಲು 15 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಜಯಲಲಿತಾ ಮೃತಪಟ್ಟ ನಂತರ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಓ ಪನೀರ್'ಸೆಲ್ವಂ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು