
ಬಂಟ್ವಾಳ (ಜು.06): ಬಿ.ಸಿ.ರೋಡ್ ಪೇಟೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ಎಸ್ಎಸ್ ಕಾರ್ಯಕರ್ತ ಶರತ್(28) ದೇಹಸ್ಥಿತಿ ಇನ್ನೂ ಗಂಭೀರವಾಗಿದ್ದು, ಗುರುವಾರ ಕೂಡ ಯಾವುದೇ ಚೇತರಿಕೆ ಕಂಡುಬಂದಿಲ್ಲ.
ಮಂಗಳವಾರ ರಾತ್ರಿಯಿಂದ ನಿರಂತರವಾಗಿ ವೈದ್ಯರು ವಿಶೇಷ ನಿಗಾ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶರತ್ ಅವರ ಮನೆಯವರು, ಸ್ನೇಹಿತರು ಆತಂಕದಲ್ಲಿದ್ದಾರೆ. ಈ ನಡುವೆ ಶರತ್ ಶೀಘ್ರ ಚೇತರಿಕೆಗೊಂಡು ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗುವಂತೆ ಸಂಕಲ್ಪ ಮಾಡಿ ಶುಕ್ರವಾರ ಬೆಳಗ್ಗೆ ಶರತ್ ಸ್ನೇಹಿತರು ಶ್ರೀ ಕ್ಷೇತ್ರ ನಂದಾವರದಲ್ಲಿ ಶ್ರೀಮೃತ್ಯುಂಜಯ ಹೋಮ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.