
ಕಾನ್ಪುರ(ಜ.27): ದೇಶ ವಿರೋಧಿ ಶಕ್ತಿಗಳು ರಾಷ್ಟ್ರದ ಶಾಂತಿ ಹಾಳು ಮಾಡುತ್ತಿವೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ಕಾನ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ದೇಶದ ಪ್ರಗತಿ ಬಯಸದ ಈ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಮೂಲಕ ತಮ್ಮ ಲಾಭ ಮಾಡಿಕೊಳ್ಳುತ್ತಿವೆ ಎಂದು ಹರಿಹಾಯ್ದರು.
ಯಾರ ವಿನಾಶವನ್ನೂ ನಾವು ಬಯಸುವುದಿಲ್ಲ, ಎಲ್ಲರೂ ಸಂತೋಷವಾಗಿರಬೇಕು ಎಂಬುದೇ ಸಂಘದ ಆಶಯ ಎಂದು ಭಾಗವತ್ ಈ ವೇಳೆ ಹೇಳಿದರು.
ಆದರೆ ದೇಶ ವಿರೋಧಿ ಶಕ್ತಿಗಳು ಶಾಂತಿ ನಾಶ ಮಾಡಲು ಪ್ರಯತ್ನಿಸುತ್ತಿದ್ದು, ಅವರ ಉದ್ದೇಶ ಎಂದೂ ಈಡೇರುವುದಿಲ್ಲ ಎಂದು ಭಾಗವತ್ ಭರವಸೆ ನೀಡಿದರು.
ಭಾರತ ವಿಶ್ವಗುರುವಾಗುವತ್ತ ಹೆಜ್ಜೆ ಇರಿಸಿದ್ದು, ಪ್ರತಿಯೊಬ್ಬ ಭಾರತೀಯ ಈ ಕಾರ್ಯ ಸಾಧನೆಗೆ ನೆರವಾಗಬೇಕು ಎಂದು ಭಾಗವತ್ ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.