
ನವದೆಹಲಿ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ರಾಷ್ಟ್ಟ್ರೀಯ ಸ್ವಯಂಸೇವಕ ಸಂಘವು (ಆರೆಸ್ಸೆಸ್) ಖಂಡಿಸಿದೆ.
ಹಿರಿಯ ಪತ್ರಕರ್ತೆ, ಚಿಂತಕಿ ಹಾಗೂ ಲೇಖಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಆರೆಸ್ಸೆಸ್ ಬಲವಾಗಿ ಖಂಡಿಸುತ್ತದೆ, ಎಂದು ದಕ್ಷಿಣ-ಮಧ್ಯ ಕ್ಷೇತ್ರದ ಸಂಘಚಾಲಕ ವಿ. ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ವಿ. ನಾಗರಾಜ್, ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಾಂಗಣ ರಾಜ್ಯಗಳನ್ನೊಳಗೊಂಡ ದಕ್ಷಿಣ-ಮಧ್ಯ ಕ್ಷೇತ್ರದಲ್ಲಿ ಸಂಘದ ಕಾರ್ಯಚಟುವಟಿಕೆಗಳಿಗೆ ಮುಖ್ಯಸ್ಥರಾಗಿದ್ದಾರೆ.
ಕ್ಷೇತ್ರಸಂಘಚಾಲಕರ ಈ ಪ್ರಕಟಣೆಗೆ ನಾಗಪುರದಲ್ಲಿರುವ ಆರೆಸ್ಸೆಸ್ ಪ್ರಧಾನ ಕಚೇರಿಯಿಂದ ಅಧಿಕೃತಗೊಂಡಿದೆಯೆನ್ನಲಾಗಿದೆ.
ಗೌರಿ ಲಂಕೇಶ್ ಹತ್ಯೆ ವಿಷಾದನೀಯ. ನಷ್ಟವನ್ನು ಭರಿಸುವಂತೆ ಅವರ ಕುಟುಂಬಸ್ಥರಿಗೆ ಭಗವಂತನು ಶಕ್ತಿ ನೀಡಲಿ. ಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕೆಂದು ನಾವು ಸರ್ಕಾರವನ್ನು ಆಗ್ರಹಿಸುತ್ತೇವೆ, ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಕಳೆದ ಮಂಗಳವಾರ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.