ಕೇರಳ ಸಿಎಂ ತಲೆ ಕಡಿಯುವ ಹೇಳಿಕೆ: ಕ್ಷಮೆ ಕೋರಿದ ಚಂದ್ರಾವತ್

Published : Mar 03, 2017, 02:50 PM ISTUpdated : Apr 11, 2018, 01:08 PM IST
ಕೇರಳ ಸಿಎಂ ತಲೆ ಕಡಿಯುವ ಹೇಳಿಕೆ: ಕ್ಷಮೆ ಕೋರಿದ ಚಂದ್ರಾವತ್

ಸಾರಾಂಶ

ಚಂದ್ರಾವತ್ ಹೇಳಿಕೆಯನ್ನು ಕಾಂಗ್ರೆಸ್, ಸಿಪಿಐ ಅಷ್ಟೇ ಅಲ್ಲದೆ, ಆರೆಸ್ಸೆಸ್ ಸಹ ಖಂಡಿಸಿತ್ತು.

ಉಜ್ಜಯಿನಿ(ಮಾ.03): ಕೇರಳದಲ್ಲಿ ಸುಮಾರು 300 ಅಮಾಯಕ ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದರೂ ಕುರುಡರಂತೆ ಕಣ್ಮುಚ್ಚಿ ಕುಳಿತಿರುವ ಮುಖ್ಯಮಂತ್ರಿ ಪಿಣರಾಯಿ ಅವರ ತಲೆ ಕಡಿದು ತಂದವರಿಗೆ ₹1 ಕೋಟಿ ಇನಾಮು ನೀಡುವುದಾಗಿ ಹೇಳಿ ತೀವ್ರ ವಿವಾದ ಸೃಷ್ಟಿಸಿದ್ದ ಆರೆಸ್ಸೆಸ್ ಮುಖಂಡ ಕುಂದನ್ ಚಂದ್ರಾವತ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ನಾನು ಈ ಹೇಳಿಕೆ ನೀಡಿದ ಬೆನ್ನಲ್ಲೇ ತಮ್ಮನ್ನು ಹತ್ಯೆ ಮಾಡುವುದಾಗಿ ಕೆಲವರು ಬೆದರಿಕೆ ಕರೆ ಮಾಡುತ್ತಿದ್ದಾರೆ. ಸಾಮಾಜಿಕ ತಾಣಗಳಲ್ಲೂ ತಮ್ಮನ್ನು ಗುರಿ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

‘ರಾಜ್ಯದಲ್ಲಿ ಸ್ವಯಂ ಸೇವಕರ ಮೇಲಿನ ದೌರ್ಜನ್ಯ ಮತ್ತು ಹತ್ಯೆ ಪ್ರಕರಣಗಳು ನನ್ನನ್ನು ಹೆಚ್ಚಾಗಿ ಭಾದಿಸಿವೆ. ಇದರಿಂದ ನಾನು ಭಾವೋದ್ವೇಗಕ್ಕೊಳಗಾಗಿ ಸಿಎಂ ವಿರುದ್ಧ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ನಾನು ವಿಷಾದಿಸುತ್ತೇನೆ,’ ಎಂಬ ಚಂದ್ರಾವತ್‌ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯ ಹಿಂದಿರುವ ಸಿಎಂ ಪಿಣರಾಯಿ ತಲೆ ಕಡಿಯುವವರಿಗೆ ಆಸ್ತಿ ಮಾರಾಟ ಮಾಡಿಯಾದರೂ, ₹1 ಕೋಟಿ ನೀಡುತ್ತೇನೆ ಎಂಬ ಚಂದ್ರಾವತ್ ಹೇಳಿಕೆಯನ್ನು ಕಾಂಗ್ರೆಸ್, ಸಿಪಿಐ ಅಷ್ಟೇ ಅಲ್ಲದೆ, ಆರೆಸ್ಸೆಸ್ ಸಹ ಖಂಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!