ಪಿಣರಾಯಿ ತಲೆಗೆ 1 ಕೋಟಿ ಘೋಷಿಸಿದ್ದ ಆರೆಸ್ಸೆಸ್ ವ್ಯಕ್ತಿ ಅರೆಸ್ಟ್

Published : Mar 28, 2017, 09:40 AM ISTUpdated : Apr 11, 2018, 12:49 PM IST
ಪಿಣರಾಯಿ ತಲೆಗೆ 1 ಕೋಟಿ ಘೋಷಿಸಿದ್ದ ಆರೆಸ್ಸೆಸ್ ವ್ಯಕ್ತಿ ಅರೆಸ್ಟ್

ಸಾರಾಂಶ

ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ.

ಉಜ್ಜಯಿನಿ(ಮಾ.28): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದ ಆರ್‌'ಎಸ್‌'ಎಸ್'ನ ಮಾಜಿ ಕಾರ್ಯಕರ್ತ ಕುಂದನ್ ಚಂದ್ರಾವತ್‌ನನ್ನು ಬಂಧಿಸಲಾಗಿದೆ.

ಚಂದ್ರಾವತ್‌'ನನ್ನು ಸೋಮವಾರ ಬಂಧಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.

ಕುಂದನ್ ಚಂದ್ರಾವತ್ ಅವರ ಹೇಳಿಕೆಯನ್ನು ಖಂಡಿಸಿ ಅವರನ್ನು ಆರೆಸ್ಸೆಸ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾ 

ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಸಂಬಂಧ ಮಾಧವ್ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

11 ನಿಮಿಷ ಉಸಿರು ಚೆಲ್ಲಿ ಬದುಕಿದ ಮಹಿಳೆ: ಸ್ವರ್ಗ- ನರಕದ ನಂಬಲಾಗದ ಅನುಭವ ಬಿಚ್ಚಿಟ್ಟಿದ್ದು ಹೀಗೆ
DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ