
ಮೈಸೂರು(ಮಾ. 06) ಮತ್ತೊಮ್ಮೆ ಆಪರೇಷನ್ ಕಮಲ ಮಾಡಲು ಬಿಜೆಪಿ ಯೋಜನೆ ಹಾಕಿಕೊಂಡಿದೆಯೇ? ನಾಯಕರ ಹೇಳಿಕೆ ಇಂಥದ್ದೊಂದು ಪ್ರಶ್ನೆಯನ್ನು ಎತ್ತಿದೆ.
ಬಿಜೆಪಿ ಸರ್ಕಾರ ಮಾಡೋದು ಮ್ಯಾಟರ್ ಆಫ್ ಡೇಸ್. ಉಮೇಶ್ ಜಾಧವ್ ರಾಜೀನಾಮೆ ಮೂಲಕ ಆರಂಭವಾಗಿದೆ. ಇನ್ನೂ ಎರಡು ತಿಂಗಳೋ, ಎರಡುವರೆ ತಿಂಗಳಲ್ಲೋ ಬಿಜೆಪಿ ಸರ್ಕಾರ ಬರುತ್ತದೆ ಎಂದು ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಈ ಸವಾಲನ್ನು ಈಶ್ವರಪ್ಪ ಸ್ವೀಕರಿಸ್ತಾರಾ?
ದೇವೇಗೌಡ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಾತಿಯನ್ನು ಜೆಡಿಎಸ್ ನವರು ಅವರ ಅನುಕೂಲಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ನವರೂ ಸಹ ಅದೇಜಾತಿ ಪ್ರೇಮದಿಂದ ರಾಜಕಾರಣ ಮಾಡ್ತಿದ್ದಾರೆ. ಇವರು ಸಮಾಜವಾದಿಯಾಗಿದ್ರೆ ಸರ್ವಜ್ಞ ನಗರ, ಎನ್.ಆರ್ ಕ್ಷೇತ್ರ, ಶಿವಾಜಿ ನಗರದಲ್ಲಿ ನಿಲ್ಲಬೇಕಿತ್ತು ಎಂದು ಸವಾಲು ಹಾಕಿದರು.
ಅದನ್ನ ಬಿಟ್ಟು ಕೊನೆಗೆ ಆಯ್ಕೆ ಮಾಡಿಕೊಂಡಿದ್ದು ಅವರ ಜಾತಿಯವರು ಹೆಚ್ಚಿರುವ ಬದಾಮಿ ಕ್ಷೇತ್ರವನ್ನು. ಅಲ್ಲಿಯೂ ಸಹ ಶ್ರೀರಾಮುಲು ಉಸಿರುಗಟ್ಟಿಸಿದ್ದರು. ಇನ್ನೊಂದ್ ಸ್ವಲ್ಪ ಉಸಿರುಗಟ್ಟಿಸಿದ್ರೆ ಸಿದ್ದರಾಮಯ್ಯ ವಿಶ್ರಾಂತಿ ಜೀವನ ಅನುಭವಿಸಬೇಕಾಗಿತ್ತು. ಆದ್ರೆ ಸ್ವಲ್ಪದರಲ್ಲೆ ಬಚಾವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.