
ನವದೆಹಲಿ (ಜ.15): ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯನ್ನು ಖಂಡಿಸಿರುವ ಸಂಯುಕ್ತ ಜನತಾ ದಳ, ಹಿಂದೂ ಸಮುದಾಯದ ವಕ್ತಾರರಂತೆ ವರ್ತಿಸಬೇಡಿ ಎಂದು ತಿರಗೇಟು ನೀಡಿದೆ.
ಮೋಹನ್ ಭಾಗವತ್ ಹೇಳಿಕೆಯನ್ನು ಮುಂಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಮತದಾರರ ಗಮನ ಸೆಳೆಯುವ ತಂತ್ರವೆಂದು ಬಣ್ಣಿಸಿರುವ ಜೆಡಿಯು ನಾಯಕ ಪವನ್ ವರ್ಮಾ, ಆರೆಸ್ಸೆಸ್’ಗೆ ಹಿಂದೂ ಸಮುದಾಯದ ವಕ್ತಾರನಂತೆ ಮಾತನಾಡುವ ಅಧಿಕಾರವಿಲ್ಲವೆಂದು ಹೇಳಿದ್ದಾರೆ.
ಎಲ್ಲಾ ಹಿಂದೂಗಳ ಪರವಾಗಿ ತಾನು ಮಾತನಾಡಬಹುದೆಂದು ಆರೆಸ್ಸೆಸ್ ಭಾವಿಸಿದಂತಿದೆ. ತನ್ನ ಬಗ್ಗೆ ಕಾಳಜಿ ವಹಿಸಲು ಹಿಂದೂ ಸಮುದಾಯವು ಸಮರ್ಥವಾಗಿದೆ, ಎಂದು ವರ್ಮಾ ಹೇಳಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಏಕಾಏಕಿ ಆ ರೀತಿಯ ಹೇಳಿಕೆಗಳನ್ನು ನೀಡಿ ಸಮಾಜವನ್ನು ಒಡೆಯುವ ಮೋಹನ್ ಭಾಗವತ್’ರ ಪ್ರಯತ್ನವು ಖಂಡನೀಯವೆಂದು ಜೆಡಿಯು ನಾಯಕ ಹೇಳಿದ್ದಾರೆ.
ನಿನ್ನೆ ಕೋಲ್ಕತ್ತಾದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಆರೆಸ್ಸೆಸ್ ಮುಖ್ಯಸ್ಥ ಭಾಗವತ್, ಭಾರತದ ಕೆಲವು ಕಡೆ ಹಿಂದೂಗಳು ಸ್ವತಂತ್ರವಾಗಿ ಜೀವಿಸುವ ಪರಿಸ್ಥಿತಿ ಇಲ್ಲ, ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.