
ಗುರುವಾಯೂರು, ಕೇರಳ: ಕೇರಳದ ಗುರುವಾಯೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪೊಲೀಸರು 3 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಭಾನುವಾರ ತ್ರಿಶೂರ್ ಜಿಲ್ಲೆಯ ಗುರುವಾಯೂರಿನಲ್ಲಿ ಅನಂತ್ ಎಂಬ ಆರೆಸ್ಸೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು.
ನಾಲ್ಕು ವರ್ಷಗಳ ಹಿಂದೆ ನಡೆದ ಕಮ್ಯೂನಿಸ್ಟ್ ಕಾರ್ಯಕರ್ತನೊಬ್ಬನ ಕೊಲೆಯಲ್ಲಿ ಅನಂತ್ ಆರೋಪಿಯಾಗಿದ್ದನು.
ಕೇರಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಬಲ ಹಾಗೂ ಎಡಪಂಥೀಯ ಕಾರ್ಯಕರ್ತರ ಹತ್ಯೆಗಳು ಭಾರೀ ಚರ್ಚೆಗೊಳಗಾಗಿವೆ,
ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿಯು ಇತ್ತೀಚೆಗೆ ರಾಜ್ಯಾದ್ಯಂತ ‘ಜನರಕ್ಷಾ’ ಯಾತ್ರೆಯನ್ನು ಹಮ್ಮಿಕೊಂಡಿತ್ತು.
ಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.