ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ; ಇಬ್ಬರ ಬಂಧನ

Published : Aug 15, 2017, 01:07 PM ISTUpdated : Apr 11, 2018, 01:08 PM IST
ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ; ಇಬ್ಬರ ಬಂಧನ

ಸಾರಾಂಶ

* RSS ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ * ಪೊಲೀಸರಿಂದ ಮೂವರು ಆರೋಪಿಗಳ ಬಂಧನ * ಖಲೀಲ್ ಉಲ್ಲಾ, ಅಬ್ದುಲ್ ಶಾಫಿ ಬಂಧಿತರು * ಜುಲೈ 4ರಂದು ಹತ್ಯೆಯಾಗಿದ್ದ ಶರತ್ ಮಡಿವಾಳ * ಐಜಿಪಿ ಹರಿಶೇಖರನ್ ನೇತೃತ್ವದಲ್ಲಿ ಕಾರ್ಯಾಚರಣೆ

ಮಂಗಳೂರು(ಆ. 15): ಬಂಟ್ವಾಳದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಖಲೀಲ್ ಉಲ್ಲಾ(30) ಮತ್ತು ಅಬ್ದುಲ್ ಶಾಫಿ(36) ಬಂಧಿತ ಆರೋಪಿಗಳಾಗಿದ್ದಾರೆ. ಸುಧೀರ್ ರೆಡ್ಡಿ ನೇತೃತ್ವದಲ್ಲಿ 30 ಅಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂಧಿಸಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಇವರಿಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಘಿದೆ. ಇಲ್ಲಿಗೆ ಕೊಲೆಯಾದ 40 ದಿನಗಳ ನಂತರ ಆರೋಪಿಗಳ ಬಂಧನವಾದಂತಾಗಿದೆ.

ಹತ್ಯೆ ಪ್ರಕರಣದಲ್ಲಿ ಪಿಎಫ್'ಐ ಸಂಘಟನೆಯ ಕೈವಾಡ ಇರಬಹುದೆಂಬ ಪೊಲೀಸರ ಶಂಕೆ ನಿಜವಾಗುವಂತಿದೆ. ಬಂಧಿತರ ಪೈಕಿ ಖಲೀಲ್ ಉಲ್ಲಾ ಚಾಮರಾಜನಗರ ಜಿಲ್ಲೆ ಪಿಎಫ್ಐ ಅಧ್ಯಕ್ಷರಾಗಿರುವುದು ಈ ಅನುಮಾನವನ್ನು ಗಟ್ಟಿ ಮಾಡಿದೆ. ಮತ್ತೊಬ್ಬ ಆರೋಪಿ ಅಬ್ದುಲ್ ಶಾಫಿ ಹಾಲಾಡಿಯ ಸಜಿಪಮುನ್ನೂರು ಗ್ರಾಮದ ನಿವಾಸಿ ಎನ್ನಲಾಗಿದೆ.

ಜುಲೈ 4ರಂದು ಬಂಟ್ವಾಳದ ಬಿ.ಸಿ.ರೋಡ್'ನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ತಮ್ಮ ಅಂಗಡಿಯ ಶಟರ್ ಮುಚ್ಚುವ ವೇಳೆ ಸುಮಾರು 6 ದುಷ್ಕರ್ಮಿಗಳು ಕತ್ತಿಯಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಅದಾಗಿ ಮೂರು ದಿನಗಳ ಬಳಿಕ ಶರತ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆ ಬಳಿಕ ಮಂಗಳೂರು, ಅದರಲ್ಲೂ ಬಂಟ್ವಾಳ ತಾಲೂಕು ಬಹಳ ಸೂಕ್ಷ್ಮ ಪರಿಸ್ಥಿತಿ ತಲುಪಿತ್ತು.

ಪ್ರಕರಣದ ತನಿಖೆಯ ಹೊಣೆ ಹೊತ್ತ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಅವರು ಕೊಲೆಗಾರರ ಪತ್ತೆಗೆ ಸುಧೀರ್ ರೆಡ್ಡಿ ನೇತೃತ್ವದಲ್ಲಿ 30 ಅಧಿಕಾರಿಗಳ ತಂಡ ರಚಿಸಿದ್ದರು. ಇವರು ಶಿವಮೊಗ್ಗ, ಕಾರವಾರ, ಹಾಸನ, ಮಂಡ್ಯ, ಬೆಂಗಳೂರು, ಕೇರಳ, ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಿ ತನಿಖೆ ನಡೆಸಿ ಈ ಇಬ್ಬರನ್ನು ಬಂಧಿಸಿದೆ. ಈ ಇಬ್ಬರ ವಿಚಾರಣೆಯಿಂದ ಇನ್ನಷ್ಟು ಆರೋಪಿಗಳ ಸುಳಿವು ಸಿಗಬಹುದೆಂಬ ವಿಶ್ವಾಸದಲ್ಲಿ ಪೊಲೀಸರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌
ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು