
ನವದೆಹಲಿ (ಏ.24): 2014ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇಶದ ಪ್ರತಿಯೊಬ್ಬರ ಖಾತೆಗಳಿಗೆ 15 ಲಕ್ಷ ರೂ ಠೇವಣಿ ಮಾಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆ ಬಗ್ಗೆ ಆರ್ಟಿಐ ಕಾಯ್ದೆಯಡಿ ಮಾಹಿತಿ ನೀಡಲು ಪ್ರಧಾನಿ ಕಚೇರಿ ನಿರಾಕರಿಸಿದೆ.
ಈ ಬಗ್ಗೆ ಆರ್ಟಿಐ ಕಾಯ್ದೆಯಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಉತ್ತರಿಸಿದ ಪ್ರಧಾನಿ ಕಾರ್ಯಾಲಯ, ‘ಚುನಾವಣೆ ರಾರಯಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು. ಹಾಕಲಾಗುತ್ತದೆ ಎಂಬ ವಿಚಾರವು ಆರ್ಟಿಐ ಕಾಯ್ದೆಯಡಿ ಬರುವುದಿಲ್ಲ. ಹೀಗಾಗಿ, ಈ ಕುರಿತು ಮಾಹಿತಿ ನೀಡಲು ಸಾಧ್ಯವಿಲ್ಲ,’ ಎಂದು ಕೇಂದ್ರೀಯ ಮಾಹಿತಿ ಆಯೋಗಕ್ಕೆ ಕಡ್ಡಿ ಮುರಿದಂತೆ ಹೇಳಿದೆ. 2016ರ ನ.26 ಅಂದರೆ, ಕೇಂದ್ರ ಸರ್ಕಾರ ನೋಟು ಅಪನಗದೀಕರಣ ಜಾರಿಗೊಳಿಸಿದ 18 ದಿನಗಳ ಬಳಿಕ ಪ್ರಧಾನಿ ಮೋದಿ ಅವರ ವಾಗ್ದಾನದಂತೆ ಯಾವ ದಿನಾಂಕದಂದು ದೇಶದ ನಾಗರಿಕರಿಗೆ ಸರ್ಕಾರ 15 ಲಕ್ಷ ರು. ಠೇವಣಿ ಮಾಡಿದೆ ಎಂದು ಅರ್ಜಿದಾರ ಮೋಹನ್ ಕುಮಾರ್ ಶರ್ಮಾ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಗೆ ಪ್ರಧಾನಿ ಕಾರ್ಯಾಲಯ ಮತ್ತು ಆರ್ಬಿಐ ಸರಿಯಾದ ಮಾಹಿತಿ ನೀಡಿಲ್ಲ ಎಂದು ವಿಚಾರಣೆ ವೇಳೆ ಮಾಹಿತಿ ಆಯೋಗದ ಮುಖ್ಯಸ್ಥ ಆರ್.ಕೆ.ಮಾಥೂರ್ ಅವರಲ್ಲಿ ಅರ್ಜಿದಾರ ಶರ್ಮಾ ದೂರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.