ರುದ್ರೇಶ್ ಕೊಲೆ ಪ್ರಕರಣ : ಬೆಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

By Web DeskFirst Published Oct 16, 2016, 5:19 PM IST
Highlights

ಬೆಂಗಳೂರಿನ 4 ಪೊಲೀಸ್ಠಾಣಾವ್ಯಾಪ್ತಿಯಲ್ಲಿನಾಳೆಬೆಳಿಗ್ಗೆ 6 ರಿಂದಮಧ್ಯರಾತ್ರಿ 12 ಗಂಟೆಯವರೆಗೆನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

ಬೆಂಗಳೂರು(ಅ.16): ನಗರದಲ್ಲಿ ಆರ್'ಎಸ್'ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಮರ್ಷಿಯಲ್ ಸ್ಟ್ರೀಟ್, ಶಿವಾಜಿ ನಗರ, ಫ್ರೇಜರ್ ಟೌನ್, ಭಾರತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ. ಸಿಸಿಬಿ ಸೇರಿದಂತೆ ಒಟ್ಟು 5 ತಂಡಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಕೊಲೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಆಯುಕ್ತ ಮೇಘರಿಕ್ ಮನವಿ ಮಾಡಿದ್ದಾರೆ.

click me!