
ಬೆಂಗಳೂರು (ಏ.3): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಗಿನ ನೇರಕ್ಕೆ ಸರ್ಕಾರದ ಮಟ್ಟದಲ್ಲಿ ನ್ಯಾಯ ಉಲ್ಲಂಘನೆ ಆಗುತ್ತಿದ್ದರೂ ಸುಮ್ಮನೆ ಕುಳಿತಿದ್ದಾರೆ.ರಾಜ್ಯದಲ್ಲಿ ಅಲ್ಪಸಂಖ್ಯಾತ ಇಲಾಖೆಯಲ್ಲಿ ನಿಯಮ ಬಾಹಿರ ಮುಂಬಡ್ತಿಯಾಗುತ್ತಿದ್ದರೂ ಸಿಎಂ ಗಮನಕ್ಕೆ ಮಾತ್ರ ಇದು ಬಂದಿಲ್ಲ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಧಕ್ಕೆ ತಂದು ಮುಂಬಡ್ತಿ ನೀಡಲಾಗುತ್ತಿದೆ. ನಿಯಮ ತಿದ್ದುಪಡಿ ಮಾಡಿ ಮುಂಬಡ್ತಿ ನೀಡುವ ಬದಲು ಹೊಸ ಕ್ರಮಕ್ಕೆ ತಿರ್ಮಾನ ಮಾಡಲಾಗಿದೆ.
ಕಾರ್ಯಕಾರಿ ಆದೇಶದ ಮೂಲಕ ತರಾತುರಿಯಲ್ಲಿ ಮುಂಬಡ್ತಿ ನೀಡಲು ಆದೇಶ ನೀಡಲಾಗಿದೆ. ಅದರೊಂದಗೆ ಬೆಳಗಾವಿ ಅಧಿವೇಶನದಲ್ಲಿ ಕೊಟ್ಟ ಭರವಸೆಯನ್ನು ಸಚಿವ ಜಮೀರ್ ಅಹಮದ್ ಮರೆತಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆಕ್ಷೇಪಕ್ಕೆ ಸಮಜಾಯಿಷಿ ಕೊಡುವ ವೇಳೆ ಜಮೀರ್ ಈ ಭರವಸೆ ನೀಡಿದ್ದರು. ವೃಂದ ಮತ್ತು ನೇಮಕಾತಿ ನಿಯಮ ರಚಿಸಿ ಆ ಮೂಲಕ ಮುಂಬಡ್ತಿ ನೀಡುವುದಾಗಿ ವಿಧಾನಪರಿಷತ್ ಕಲಾಪದಲ್ಲಿ ಸಚಿವ ಜಮೀರ್ ಅಹಮದ್ ಭರವಸೆ ಕೊಟ್ಟಿದ್ದರು. ಈಗ ನೇಮಕಾತಿ ನಿಯಮ ಬದಲಾವಣೆ ಮುನ್ನವೇ ಅಲ್ಪಸಂಖ್ಯಾತ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗುತ್ತಿದೆ.
ಒಳ ಮೀಸಲಾತಿಗೂ ಜಾರಿಯಾಗುವ ಸೂಚನೆ: ಮುಂಬಡ್ತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ. ಆದೇಶ ಹೊರಬಿಳುವ ಮುನ್ನವೇ ಕಾರ್ಯಾಕಾರಿ ಆದೇಶದ ಮೂಲಕ ಮುಂಬಡ್ತಿ ನೀಡಲು ಪ್ಲ್ಯಾನ್ ಮಾಡಲಾಗಿದೆ. ತರಾತುರಿ ಆದೇಶ ಹೊರಡಿಸುವ ಮೂಲಕ ಪರಿಶಿಷ್ಟ ನೌಕರರ ಹಿತಕ್ಕೆ ಧಕ್ಕೆ ತಂದಿರುವ ಬಗ್ಗೆ ಚರ್ಚೆ ಆಗುತ್ತಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಎಸ್.ಸಿ ನೌಕರರಿಗೆ ಇದರಿಂದ ಅನ್ಯಾಯವಾಗಲಿದೆ. ಅಲ್ಪಸಂಖ್ಯಾತರ ಇಲಾಖೆಯಲ್ಲಿ 2010 ರಿಂದಲೂ ನೇಮಕಾತಿ ನಿಯಮ ರೂಪಿಸಿಲ್ಲ. 15 ವರ್ಷಗಳಿಂದ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲು ಸರ್ಕಾರ ಮೀನ ಮೇಷ ಎಣಿಸುತ್ತಿದೆ.
ಒಳಮೀಸಲಾತಿ ವರದಿ ಬರುವ ಮುನ್ನ ಯಾವುದೇ ಮುಂಬಡ್ತಿ ಕೊಡಬಾರದು ಎಂದು ಸರ್ಕಾರ ಹೇಳಿದೆ. ಮುಂಬಡ್ತಿ, ನೇಮಕಾತಿ ಮಾಡದಂತೆ ಸಿಎಂ ಸೂಚನೆ ಕೊಟ್ಟಿದ್ದರೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅದಕ್ಕೆ ಕ್ಯಾರೇ ಎಂದಿಲ್ಲ.ನಿಯಮ ಬಾಹಿರವಾಗಿ ಮುಂಬಡ್ತಿ ನೀಡುವ ಆದೇಶವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದೆ.
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಬೆನ್ನಲ್ಲೇ ಶಿಕ್ಷಣ-ಉದ್ಯೋಗ ಮೀಸಲಾತಿ ಶೇ.10ಕ್ಕೆ ಹೆಚ್ಚಿಸಲು ಸ್ಪಂದಿಸಿದ ಸರ್ಕಾರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.