
ಗಾಂಧಿನಗರ : ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಸ್ವತಃ ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಗುಜರಾತ್ ಮಂತ್ರಿಮಂಡಲದಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆಗೆ ಒತ್ತಡ ಕೇಳಿ ಬರುತ್ತಿದೆ ಎಂದು ಪಾಟೀದಾರ್ ಆಂದೋಲನದ ಮುಖಂಡರಾದ ಹಾರ್ದಿಕ್ ಪಟೇಲ್ ಹೇಳಿಕೆ ನೀಡಿದ್ದರು.
ಅಲ್ಲದೇ ಅವರು ಶಿಘ್ರವೇ ತಮ್ಮ ಸ್ಥಾನವನ್ನೂ ಕೂಡ ತೊರೆಯಲಿದ್ದಾರೆ . 10 ದಿನಗಳಲ್ಲೇ ಈ ಬಗ್ಗೆ ಘೋಷಣೆ ಹೊರಬೀಳಲಿದೆ. ಶೀಘ್ರದಲ್ಲೇ ಪಾಟೀದರ್ ಅಥವಾ ರಜಪೂತ್ ಮುಖಂಡರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದರು.
ಇದಕ್ಕೆ ಇದೀಗ ವಿಜಯ್ ರೂಪಾನಿ ಹಾಗೂ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಅನೇಕ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಇದೊಂದು ವದಂತಿ ಎಂದು ಸ್ಪಷ್ಟ ಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.