
ನವದೆಹಲಿ(ಸೆ.24): ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ ದನಿ ಎತ್ತಿದ ಪರಿಣಾಮ ರಷ್ಯಾವು ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್'ನಲ್ಲಿ ಜಂಟಿ ಸಮರಾಭ್ಯಾಸವನ್ನು ರದ್ದುಪಡಿಸಿದೆ. ಕೇವಲ ಪೇಶಾವರದ ಚರಾಟ್ ಮಾತ್ರ ಜಂಟಿ ಸಮರಾಭ್ಯಾಸ ನಡೆಸಲು ನಿರ್ಧರಿಸಿದೆ.
ರಷ್ಯಾ ಸಹ ಪಾಕ್ ಸೇನಾ ನೆರವಿನಿಂದ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ನಡೆಸಿರುವ ದಾಳಿಯನ್ನು ತೀರ್ವವಾಗಿ ಖಂಡಿಸಿದೆ. ಭಾರತವು ಸಹ ಹಲವು ವರ್ಷಗಳಿಂದ ರಷ್ಯಾದ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದೆ. ಮುಂದಿನ ತಿಂಗಳು ಅಕ್ಟೋಬರ್ 15 ರಂದು ಭಾರತ ಮತ್ತು ರಷ್ಯಾ ನಡುವೆ ವಾರ್ಷಿಕ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯಲ್ಲಿ ಐದನೇ ಪೀಳಿಗೆಯ ಯುದ್ಧ ಜೆಟ್'ಗಳ ಖರೀದಿಗೆ ಪ್ರಮುಖ ಒಪ್ಪಂದವಾಗುವ ಸಂಭವವಿದೆ.
ರಷ್ಯಾ ನೆರವಿನ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ನೂತನ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುವುದಕ್ಕೆ 2 ದೇಶಗಳು ನಡುವೆ ಒಪ್ಪಂದವಾಗುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.