
ಬೆಂಗಳೂರು(ಅ.16): ರಷ್ಯಾ ಸಚಿವರು ಮತ್ತು ಅಕಾರಿಗಳಿದ್ದ ವಿಶೇಷ ವಿಮಾನ ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಗೋವಾದಲ್ಲಿ ಆಯೋಜನೆಗೊಂಡಿದ್ದ ‘‘ಬ್ರಿಕ್ಸ್’’ ಸಮ್ಮೇಳನಕ್ಕೆ ಹೋಗಬೇಕಿದ್ದ ರಷ್ಯಾ ವಿಮಾನ ಹವಾಮಾನ ವೈಪರಿತ್ಯದಿಂದ ಶನಿವಾರ ಬೆಳಗ್ಗೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ನಿಲ್ದಾಣದಲ್ಲಿ ಇಳಿದ ವಿಮಾನ 10 ಗಂಟೆ ಸುಮಾರಿಗೆ ಇಂಧನ ತುಂಬಿಸಿಕೊಂಡು ಮತ್ತೆ ಗೋವಾ ಕಡೆ ಹೊರಟಿತು. ಈ ವಿಮಾನದಲ್ಲಿ ರಷ್ಯಾದ ರೈಲ್ವೆ ಸಚಿವ ಹಾಗೂ ಇತರೆ ಗಣ್ಯರಿದ್ದರು ಎಂದು ವಿಮಾನ ನಿಲ್ದಾಣದ ಅಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.