ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವ ಆರ್.ವಿ.ದೇಶಪಾಂಡೆ ಉಪಹಾರ

Published : Jan 09, 2019, 11:14 AM ISTUpdated : Jan 09, 2019, 11:16 AM IST
ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವ ಆರ್.ವಿ.ದೇಶಪಾಂಡೆ ಉಪಹಾರ

ಸಾರಾಂಶ

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದ ಬರ ಅಧ್ಯಯನ ತಂಡವು ಮಂಗಳವಾರ ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಿತು. ಈ ವೇಳೆ ಬೀಳಗಿ ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಉಪಾಹಾರ ಸೇವಿಸಿದೆ. 

ಬೀಳಗಿ: ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯ ಬರ ಅಧ್ಯಯನ ತಂಡವು ಮಂಗಳವಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಉಪಾಹಾರ ಸೇವಿಸಿದೆ. 

ಅಲ್ಲದೇ ಸ್ಥಳೀಯ ಶಾಸಕ ಮುರುಗೇಶ ನಿರಾಣಿ ಅವರಿಂದ ಸನ್ಮಾನ ಸ್ವೀಕರಿಸಿ ಮಧ್ಯಾಹ್ನದ ಭೋಜನವನ್ನು ನಿರಾಣಿ ಮನೆಯಲ್ಲಿ ಮಾಡಿದೆ. 

ಲೋಕ ಚುನಾವಣಾ ಬೆನ್ನಲ್ಲೇ ಬಿಜೆಪಿ ಮೈತ್ರಿಗೆ ಮತ್ತೊಂದು ಪಕ್ಷ ಕೋಕ್?

ಇದು ಸ್ಥಳೀಯ ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ದೇಶಪಾಂಡೆ ನೇತೃತ್ವದಲ್ಲಿ ಬಂದಿದ್ದ ಸಿ.ಎಸ್.ಶಿವಳ್ಳಿ, ಮನಗೂಳಿ, ಶಿವಾನಂದ ಪಾಟೀಲ್ ಬಿಜೆಪಿ ಕಾರ್ಯಾಲಯದಲ್ಲಿ ಉಪಾಹಾರ ಸೇವಿಸಿದರು.

ಈ ನಡೆ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ