
ಸುವರ್ಣ ವಿಧಾನಸೌಧ : ‘ಬಿಜೆಪಿ ನಾಯಕರ ಔತಣಕೂಟದಲ್ಲಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಜರಾಗಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೇರೆ ಪಕ್ಷದವರು ಪ್ರೀತಿ, ವಿಶ್ವಾಸದಿಂದ ಔತಣ ಕೂಟಕ್ಕೆ ಆಹ್ವಾನಿಸುತ್ತಾರೆ. ಮದುವೆಯಂತಹ ಸಮಾರಂಭಗಳಿಗೂ ಆಹ್ವಾನಿಸುತ್ತಾರೆ. ಅಲ್ಲಿ ಹೋದರೆ ತಪ್ಪೇನಿದೆ’ ಎಂದು ಪ್ರಶ್ನಿಸಿದರು.
ಸಚಿವ ಡಿ.ಕೆ.ಶಿವಕುಮಾರ ಕರೆದ ಔತಣಕೂಟಕ್ಕೆ ರಮೇಶ್ ಜಾರಕಿಹೊಳಿ ಗೈರಾಗಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ ‘ಅವರನ್ನೇ ಕೇಳಿ’ ಎಂದರು.
ಇನ್ನು ಮುಂದೆ ಕರೆದರೆ ಹೋಗಲ್ಲ
ಬಿಜೆಪಿಯ ಸ್ನೇಹಿತರು ಕರೆದ ಔತಣಕೂಟದಲ್ಲಿ ಪಾಲ್ಗೊಂಡಿದ್ದೆ, ಇದನ್ನು ತಪ್ಪು ತಿಳಿಯುವುದು ಬೇಡ. ಇನ್ನು ಮುಂದೆ ಅವರು ಕರೆದರೆ ನಾನು ಬರುವುದಿಲ್ಲ ಎನ್ನುತ್ತೇನೆ.
- ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.