ತಿಮ್ಮಕ್ಕ ಬಗ್ಗೆ ವದಂತಿ : ಪೊಲೀಸರಿಗೆ ದೂರು

Published : May 26, 2018, 06:59 PM ISTUpdated : May 26, 2018, 08:01 PM IST
ತಿಮ್ಮಕ್ಕ ಬಗ್ಗೆ ವದಂತಿ : ಪೊಲೀಸರಿಗೆ ದೂರು

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಸಾವಿನ ಸುದ್ದಿ ವರದಿ ಆಗುತ್ತಿರುವುದು ಇದೇ ಮೊದಲಲ್ಲ. ಮೊದಲು ಅಂಬರೀಷ್, ನಂತರ ಜಯಂತಿ, ಇದೀಗ ಸಾಲು ಮರದ ತಿಮ್ಮಕ್ಕ ಅವರ ಸುದ್ದಿಯೂ ವೈರಲ್ ಆಗಿತ್ತು. ಇಂಥ ಸುದ್ದಿಗಳನ್ನು ಶೇರ್ ಮಾಡಿಕೊಳ್ಳುವ ಮುನ್ನ ಕೌಂಟರ್ ಚೆಕ್ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜ್ಞಾವಂತರ ಕರ್ತವ್ಯ. ಪ್ರತಿಯೊಬ್ಬರನ್ನೂ ಎಚ್ಚರಿಸುವ ದೃಷ್ಟಿಯಿಂದ ತಿಮ್ಮಕ್ಕ ಅವರ ಸಾಕು ಮಗ ಇಂಥ ಸುದ್ದಿ ಹರಡುವವರು ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಬೆಂಗಳೂರು(ಮೇ.26): ಸಾಮಾಜಿಕ ಜಾಲತಾಣಗಳಲ್ಲಿ ಸಾಲು ಮರದ ತಿಮ್ಮಕ್ಕ ಸಾವಿನ ಬಗ್ಗೆ ವದಂತಿ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಿಗೆ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರು ದೂರು ನೀಡಿದ್ದಾರೆ.


ಕಳೆದ ರಾತ್ರಿ ಕಿಡಿಗೇಡಿಗಳು ಸಾಮಾಜಿಕ ಜಾಲಾತಾಣಗಳಲ್ಲಿ ಬೇರೆಯವರ ಮೃತದೇಹದ ಫೋಟೊ ಹಾಕಿ ಅವಮಾನ ಮಾಡಿದ್ದಾರೆ.  ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಆಯುಕ್ತರ ಮೂಲಕ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. 


ಈ ನಡುವೆ ಸ್ವತಃ ಸಾಲು ಮರದ ತಿಮ್ಮಕ್ಕ ಹೇಳಿಕೆ ನೀಡಿ 'ನಾನು ಇನ್ನೂ ಜೀವಂತವಾಗಿ ಇದ್ದೀನಿ. ಆದರೂ ಕೆಲವರು ನಾನು ಸಾವನ್ನಪ್ಪಿದ್ದೇನೆ ಅಂತಾ ಬರೆದಿದ್ದಾರೆ. ಕೆಲವರು ಫೋಟೋಗಳನ್ನು ಹಾಕಿದ್ದಾರೆ. ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರನ್ನು ಬಂಧಿಸಬೇಕು' ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಪಿಎಲ್ ಕಾರ್ಡ್ ಆದಾಯ ಮಿತಿ 1.80 ಲಕ್ಷಕ್ಕೆ ಏರಿಕೆ? ಸಚಿವ ಮುನಿಯಪ್ಪ ಕೊಟ್ಟ ಬಿಗ್ ಅಪ್ಡೇಟ್ ಏನು?
ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಕರವೇ ಕೆಂಡ; ನಾರಾಯಣ ಗೌಡರ ಹೋರಾಟಕ್ಕೆ ಮಣಿದು ಹೊಸ ಅಧಿಸೂಚನೆ ಹೊರಡಿಸಿದ ಇಲಾಖೆ!