ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಹರಸಿ ಹಸಿರಮ್ಮ ಎಂದ ರಾಷ್ಟ್ರಪತಿ!

Published : Mar 16, 2019, 09:09 PM IST
ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಹರಸಿ ಹಸಿರಮ್ಮ ಎಂದ ರಾಷ್ಟ್ರಪತಿ!

ಸಾರಾಂಶ

ಸಾಲು ಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ| ರಾಷ್ಟ್ರಪತಿ ಭವನದಲ್ಲಿ ತಿಮ್ಮಕ್ಕ ಅವರಿಗೆ ಪ್ರಶಸ್ತಿ ಪ್ರಧಾನ| ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್| ಪ್ರಶಸ್ತಿ ಸ್ವೀಕರಿಸಿ ಕೋವಿಂದ್ ಅವರಿಗೆ ಆರ್ಶೀವಾದ ನೀಡಿದ ತಿಮ್ಮಕ್ಕ| 

ನವದೆಹಲಿ(ಮಾ.16): ಸಾವಿರಾರು ಸಸಿಗಳನ್ನು ನೆಟ್ಟು ಪೋಷಿಸಿದ ಸಾಲು ಮರದ ತಿಮ್ಮಕ್ಕ ಅವರಿಗೆ ಇಂದು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ತಿಮ್ಮಕ್ಕ ಅವರು ರಾಷ್ಟ್ರಪತಿ ಅವರ ಹಣೆ ಮುಟ್ಟಿ ಆಶೀರ್ವದಿಸಿದರು.

ರಾಷ್ಟ್ರಪತಿಗಳು ಸಹ ದೀರ್ಘಾಯುಶಿ ತಿಮ್ಮಕ್ಕ ಅವರನ್ನು ಆಶೀರ್ವಾದವನ್ನು ಭಕ್ತಿ ಪೂರ್ವಕವಾಗಿ ಸ್ವೀಕರಿಸಿದ ಅಪೂರ್ವ ಘಟನೆ ನಡೆಯಿತು. ಪ್ರಶಸ್ತಿ ಸಮಾರಂಭದ ವೇಳೆ ರಾಷ್ಟ್ರಪತಿ ಭವನದಲ್ಲಿ ಪಾಲಿಸಲಾಗುವ ಶಿಷ್ಟಾಚಾರವನ್ನು ರಾಷ್ಟ್ರಪತಿಗಳು ಬದಿಗೊತ್ತಿದ್ದು ವಿಶೇಷವಾಗಿತ್ತು.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಬರುತ್ತಿದ್ದಂತೆ ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಚಪ್ಪಾಳೆ ತಟ್ಟುವ ಮುಖಾಂತರ ಸಾಲುಮರದ ತಿಮ್ಮಕ್ಕರಿಗೆ ಗೌರವ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

1971ರ ಯುದ್ಧದಲ್ಲಿ ಭಾರತ ಮುಳುಗಿಸಿದ್ದ ಪಿಎನ್‌ಎಸ್‌ ಘಾಜಿ ಸಬ್‌ಮರೀನ್‌ ನೌಕೆ ಪುನಃ ಪಡೆದ ಪಾಕಿಸ್ತಾನ
ರಾಮನಗರದಲ್ಲಿದೆ ವಾರಸುದಾರರಿಲ್ಲದ 48.69 ಕೋಟಿ ರು! ಹಣ ವಾಪಸ್ ಹಿಂದಿರುಗಿಸಲು ನಿಮ್ಮ ಹಣ-ನಿಮ್ಮ ಹಕ್ಕು ಅಭಿಯಾನ