ಜನರನ್ನು ಲೂಟಿ ಮಾಡುತ್ತಿರುವ ಕೇಂದ್ರ: ಮೋದಿ ಸರ್ಕಾರದ ವಿರುದ್ಧ ಶಿವಸೇನೆ ಕಿಡಿ

Published : Dec 09, 2017, 12:00 PM ISTUpdated : Apr 11, 2018, 01:05 PM IST
ಜನರನ್ನು ಲೂಟಿ ಮಾಡುತ್ತಿರುವ ಕೇಂದ್ರ: ಮೋದಿ ಸರ್ಕಾರದ ವಿರುದ್ಧ ಶಿವಸೇನೆ ಕಿಡಿ

ಸಾರಾಂಶ

ಕೇಂದ್ರವು ಉದ್ದೇಶಿಸಿರುವ ‘ಹಣಕಾಸು ಗೊತ್ತುವಳಿ ಹಾಗೂ ಠೇವಣಿ ವಿಮೆ (ಎಫ್’ಆರ್‌ಡಿಐ) ಮಸೂದೆ-2017’ ಕುರಿತು ಬಿಜೆಪಿ ಮಿತ್ರಪಕ್ಷ ಶಿವಸೇನೆಯು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಮುಂಬೈ: ಕೇಂದ್ರವು ಉದ್ದೇಶಿಸಿರುವ ‘ಹಣಕಾಸು ಗೊತ್ತುವಳಿ ಹಾಗೂ ಠೇವಣಿ ವಿಮೆ (ಎಫ್’ಆರ್‌ಡಿಐ) ಮಸೂದೆ-2017’ ಕುರಿತು ಬಿಜೆಪಿ ಮಿತ್ರಪಕ್ಷ ಶಿವಸೇನೆಯು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಆ ಮಸೂದೆಯ ಮೂಲಕ ಕೇಂದ್ರವು ಜನಸಾಮನ್ಯರನ್ನು ಲೂಟಿ ಮಾಡಲು ಹೊರಟಿದೆಯೆಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

ಈ ಮಸೂದೆಯ ಮೂಲಕ ದಿವಾಳಿಯಾದ ಬ್ಯಾಂಕುಗಳಿಗೆ ಜನರ ಹಣವನ್ನು ಬಳಸಲು ಅಧಿಕಾರ ನೀಡಲಾಗಿದೆ. ಆದುದರಿಂದ ಜನರು ಆತಂಕಗೊಂಡಿದ್ದಾರೆ ಎಂದು ಶಿವಸೇನೆಯು ಹೇಳಿದೆ.  

ಬ್ಯಾಂಕ್‌ಗಳು ದಿವಾಳಿಯಾದಲ್ಲಿ ಠೇವಣಿದಾರರ ಹಿತ ಕಾಯುವ ‘ಠೇವಣಿ ವಿಮೆ ಹಾಗೂ ಸಾಲ ಖಾತರಿ ನಿಗಮ’ವನ್ನು ರದ್ದುಗೊಳಿಸುವ ಪ್ರಸ್ತಾವಿತ ಬ್ಯಾಂಕ್ ದಿವಾಳಿ ಮಸೂದೆಯ ಬಗ್ಗೆ ಠೇವಣಿದಾರರಲ್ಲಿ ಆತಂಕ ಶುರುವಾಗಿದೆ. ಆದರೆ, ‘ಈ ಬಗ್ಗೆ ಆತಂಕ ಬೇಡ. ಇದನ್ನು ಬದಲಿಸಲು ಅವಕಾಶವಿದೆ’ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ.

‘ಹಣಕಾಸು ಗೊತ್ತುವಳಿ ಹಾಗೂ ಠೇವಣಿ ವಿಮೆ (ಎಫ್’ಆರ್‌ಡಿಐ) ಮಸೂದೆ-2017’ ಹೆಸರಿನ ಈ ವಿಧೇಯಕವನ್ನು ಡಿ.15ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ.

ಈ ವಿಧೇಯಕದಲ್ಲಿ ‘ಠೇವಣಿ ವಿಮೆ ಹಾಗೂ ಸಾಲ ಖಾತರಿ ನಿಗಮ’ವನ್ನು (ಡಿಐಸಿಜಿಇ) ರದ್ದುಗೊಳಿಸುವ ಪ್ರಸ್ತಾಪ ಇದೆ.

ಈ ನಿಗಮವು ಬ್ಯಾಂಕ್ ದಿವಾಳಿ ಆದರೂ ಕೂಡ ಠೇವಣಿದಾರರಿಗೆ 1 ಲಕ್ಷ ರು.ವರೆಗಿನ ಠೇವಣಿ ವಾಪಸು ಬರುವಂತೆ ಖಾತರಿ ನೀಡುತ್ತದೆ. ಆದರೆ ಸಿಐಸಿಜಿಇಯನ್ನು ರದ್ದು ಮಾಡಿದರೆ ಠೇವಣಿದಾರರ ಸುರಕ್ಷತೆಯ ಹಣೆಬರಹವೇನು ಎಂಬ ಆತಂಕ ಬ್ಯಾಂಕ್ ಗ್ರಾಹಕರಲ್ಲಿ ಮನೆ ಮಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ