ಕೇರಳದಲ್ಲಿ ಭುಗಿಲೆದ್ದ ಹಿಂಸಾಚಾರ : ಇಂದು ರಾಜ್ಯ ಬಂದ್

Published : Jan 03, 2019, 07:55 AM IST
ಕೇರಳದಲ್ಲಿ ಭುಗಿಲೆದ್ದ ಹಿಂಸಾಚಾರ : ಇಂದು ರಾಜ್ಯ ಬಂದ್

ಸಾರಾಂಶ

ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಕೇರಳದ ಅನೇಕ ಕಡೆ ಹಿಂಸಾಚಾರ ಭುಗಿಲೆದ್ದಿದೆ. ಈ ನಿಟ್ಟಿನಲ್ಲಿ ಗುರುವಾರ ಶಬರಿಮಲೆ ಕರ್ಮ ಸಮಿತಿ ಕೇರಳ ಬಂದ್‌ಗೆ ಕರೆ ನೀಡಿದೆ. 

ಶಬರಿಮಲೆ :  ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ ಗೊತ್ತಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕೇರಳದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅನೇಕ ಕಡೆ ಹಿಂಸಾಚಾರ ನಡೆದಿದೆ. 

ಸಿಎಂ ಕಚೇರಿ ಇರುವ ರಾಜ್ಯ ಸಚಿವಾಲಯಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದಾಗ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. 

ಇಂದು ಕೇರಳ ಬಂದ್‌ಗೆ ಕರೆ

ಅಯ್ಯಪ್ಪ ದೇಗುಲದ ಸಂಪ್ರದಾಯ ಮಹಿಳಾ ಪ್ರವೇಶದೊಂದಿಗೆ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಶಬರಿಮಲೆ ಕರ್ಮ ಸಮಿತಿ ಗುರುವಾರ ಕೇರಳ ಬಂದ್‌ಗೆ ಕರೆ ನೀಡಿದೆ. 

ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಹರತಾಳ ನಡೆಸಲಾಗುತ್ತದೆ ಎಂದು ಘೋಷಿಸಿದೆ. ಮುಂದಿನ 2 ದಿನ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಪ್ರಕಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್