ಕೇರಳ ಉದ್ವಿಗ್ನ: ಬಿಜೆಪಿ ಕಚೇರಿಗೆ ಕಮ್ಯುನಿಸ್ಟ್ ಕಾರ್ಯಕರ್ತರಿಂದ ಬೆಂಕಿ!

Published : Jan 04, 2019, 03:14 PM IST
ಕೇರಳ ಉದ್ವಿಗ್ನ: ಬಿಜೆಪಿ ಕಚೇರಿಗೆ ಕಮ್ಯುನಿಸ್ಟ್ ಕಾರ್ಯಕರ್ತರಿಂದ ಬೆಂಕಿ!

ಸಾರಾಂಶ

ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರ ಪ್ರವೇಶದಿಂದ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯಾದ್ಯಂತ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಬಿಜೆಪಿ ಕಚೇರಿ ಮೇಲೆ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ.

ಶಬರಿಮಲೆ[ಜ.04]: ಶಬರಿಮಲೆಗೆ ಇಬ್ಬರು ಮಹಿಳೆಯರ ಪ್ರವೇಶದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಭಟನೆಯು ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಇದೀಗ ಕಮ್ಯೂನಿಸ್ಟ್ ಕಾರ್ಯಕರ್ತರು ಕಣ್ಣೂರಿನ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಓರ್ವ ಕಾರ್ಯಕರ್ತನೆಗೆ ಗಂಭೀರ ಗಾಯಗಳಾಗಿವೆ. 

ವಿರೋಧಕ್ಕೂ ಡೋಂಟ್ ಕೇರ್: ಶಬರಿಮಲೆ ಪ್ರವೇಶಿಸಿದ ಮತ್ತೊಬ್ಬ ಮಹಿಳೆ!

ಗುರುವಾರದಂದು ಬಿಜೆಪಿ ಕಾರ್ಯಕರ್ತರು ಪಾಲಕ್ಕಾಡ್ ನ ಸಿಪಿಎಂ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರಿಂದ ಕೆರಳಿದ ಕಾರ್ಯಕರ್ತರು ಪ್ರತೀಕಾರವಾಗಿ ಬಿಜೆಪಿ ಕಚೇರಿಗೆ ಇಂದು ಶುಕ್ರವಾರ ಬೆಂಕಿ ಹಚ್ಚಿದ್ದಾರೆ. ನಿನ್ನೆ ಹಿಂಸಾಚಾರ ಹಾಗೂ ಬಂದ್ ಗೆ ಸಂಬಂಧಿಸಿದಂತೆ 1000 ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂಧಿಸಲಾಗಿತ್ತು. ಅತ್ತ ತ್ರಿಸ್ಸೂರ್ ನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚಾಕುವಿನಿಂದ ಇರಿದಿದ್ದ ಮೂವರು SDPI ಕಾರ್ಯಕರ್ತರನ್ನೂ ಪೊಲೀಸರು ಈಗಾಗಲೇ ಕಂಬಿ ಹಿಂದೆ ಹಾಕಿದ್ದರು. ಇನ್ನು ಕಲ್ಲು ತೂರಾಟದಲ್ಲಿ ಬಲಿಯಾಗಿದ್ದ ಚಂದ್ರನ್ ಉನ್ನಿತ್ತಾನ್ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಪಂದಳಂ ನಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕೇರಳ ಬಂದ್ ವೇಳೆ ಹಿಂಸಾಚಾರ, ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ

ಹಿಂಸಾಚಾರ ಹಾಗೂ ಪ್ರತಿಭಟನೆಯಿಂದ ನಿರ್ಮಾಣವಾದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇರಳ ಪೊಲೀಸರು ಆಪರೇಷನ್ ಬ್ರೋಕನ್ ವಿಂಡೋ ಕಾರ್ಯಾಚರಣೆ ಮುಂದುವರೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ