
ತಿರುವನಂತಪುರ[ಜೂ.27]: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ, ಶಬರಿಮಲೆಗೆ ಮಹಿಳೆಯರ ಪ್ರವೇಶವೇ ಕಾರಣ ಎಂದು ಸಿಪಿಎಂ ಒಪ್ಪಿಕೊಂಡಿದೆ. ಲೋಕಸಭಾ ಸೋಲಿನ ಕುರಿತ ಸಿದ್ಧಪಡಿಸಲಾದ ವರದಿಯಲ್ಲಿ ಈ ಅಂಶವನ್ನು ಸಿಪಿಎಂ ಒಪ್ಪಿಕೊಂಡಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಇಲ್ಲಿ ಸಿಪಿಎಂ ರಾಜ್ಯ ಘಟಕದ ಆತ್ಮಾವಲೋಕನಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು, ಸಭೆಯ ಪ್ರಮುಖ ಅಂಶಗಳನ್ನು ಪಕ್ಷದ ಮುಖವಾಣಿ ದೇಶಾಭಿಮಾನಿಯಲ್ಲಿ ಪ್ರಕಟಿಸಲಾಗಿದೆ. ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ರಾಜ್ಯದಲ್ಲಿನ ಆಢಳಿತಾರೂಢ ಸಿಪಿಎಂ ಬೆಂಬಲಿಸಿತ್ತು. ಜೊತೆಗೆ ಮಹಿಳೆಯರ ಪ್ರವೇಶಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಮಾಡಿದ್ದ ಪ್ರತಿಭಟನೆ ವಿರೋಧಿಸಿ ಕೇರಳದಾದ್ಯಂತ ಜ.1ಕ್ಕೆ ಮಾನವ ಸರಪಳಿ ರಚಿಸಿತ್ತು.
ಅದಾದ ಬೆನ್ನಲ್ಲೇ ಇಬ್ಬರು ಮಹಿಳೆಯರು ರಾಜ್ಯ ಸರ್ಕಾರದ ಪೊಲೀಸರ ನೆರವಿನೊಂದಿಗೆ ದೇಗುಲ ಪ್ರವೇಶಿದ್ದರು. ಈ ವಿಷಯವನ್ನು ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖವಾಗಿ ಬಿಂಬಿಸಿದ್ದವು. ಇದೇ ಸೋಲಿಗೆ ಕಾರಣವಾಯ್ತು ಎಂದು ಪಕ್ಷದ ಆಂತರಿಕ ವರದಿಯಲ್ಲಿ ಹೇಳಲಾಗಿದೆ. ರಾಜ್ಯದ 20 ಲೋಕಸಭಾ ಸ್ಥಾನಗಳ ಪೈಕಿ ಸಿಪಿಎ ನೇತೃತ್ವದ ಎಲ್ಡಿಎಫ್ ಕೇವಲ 1 ಸ್ಥಾನ ಗೆದ್ದಿತ್ತು. ಯುಡಿಎಫ್ 19 ಸ್ಥಾನ ಗೆದ್ದುಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.