
ಬೆಂಗಳೂರು(ಜ. 15): ಇಲ್ಲಿಯ ಫ್ರೀಡಂಪಾರ್ಕ್'ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ವಂಚನೆಯ ಆರೋಪಿ ಸಚಿನ್ ನಾಯ್ಕ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗ್ತಿದೆ. ಸಚಿನ್ ನಾಯ್ಕ್'ನಿಂದ ವಂಚನೆಗೊಳಗಾದವರು ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡ್ರೀಮ್ಸ್ ಜಿಕೆ, ಟಿಜಿಎಸ್ ಕಂಪನಿ ಹೆಸರಿನಲ್ಲಿ ನೂರಾರು ಕೋಟಿ ಹಣ ವಂಚಿಸಿರುವ ಸಚಿನ್ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿರುವ ಸಂತ್ರಸ್ತರು, ಗಾಂಧೀಜಿ ಫೋಟೊ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿನ್ ನಾಯ್ಕ್ ವಿರುದ್ಧ ಬೆಂಗಳೂರಿನಲ್ಲಿ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈತನ ವಂಚನೆ ಬಗ್ಗೆ ಸುವರ್ಣನ್ಯೂಸ್ ಕೆಲ ದಿನಗಳ ಹಿಂದೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.