ಲೋಕಸಭೆ ಸೋಲು : ಬೆಂಬಲಿಗರೊಂದಿಗೆ ಡಿಸಿಎಂ ರಾಜೀನಾಮೆ?

Published : May 29, 2019, 01:13 PM ISTUpdated : May 29, 2019, 01:20 PM IST
ಲೋಕಸಭೆ ಸೋಲು : ಬೆಂಬಲಿಗರೊಂದಿಗೆ ಡಿಸಿಎಂ ರಾಜೀನಾಮೆ?

ಸಾರಾಂಶ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಇದೀಗ  ಇನ್ನೋರ್ವ ನಾಯಕನ ರಾಜೀನಾಮೆ ವಿಚಾರವೂ ಚರ್ಚೆಯಾಗುತ್ತಿದೆ. 

ಜೈಪುರ : ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಎಐಸಿಸಿ ಹುದ್ದೆ ತೊರೆಯಲು ಬದ್ಧರಾಗಿದ್ದಾಗಿ  ಹೇಳಿದ್ದರು. ಇದೀಗ ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಹುದ್ದೆ ತೊರೆಯುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿ ಬಂದಿದೆ.  

ಒಂದು ವೇಳೆ ರಾಹುಲ್ ಅಧ್ಯಕ್ಷ ಸ್ಥಾನ ತೊರೆದಲ್ಲಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಸಚಿನ್ ಪೈಲಟ್ ತಮ್ಮ ಬೆಂಬಲಿಗ ಶಾಸಕರೊಂದಿಗೆ ಎರಡೂ ಸ್ಥಾನದಿಂದ ಹೊರನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 

2014ರಲ್ಲಿ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. 

ಫಾರೂಕ್ ಅಳಿಯ, ಸೇನಾಧಿಕಾರಿ, ಕಿರಿಯ ಎಂಪಿ ಪೈಲಟ್ ಜೀವನಗಾಥೆಯಿದು!

ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದ್ದು, ಇದರಿಂದ ಇಲ್ಲಿ ಅಸ್ತಿತ್ವದಲ್ಲಿ ಇರುವ ರಾಜ್ಯ ಸರ್ಕಾರದ ಮೇಲೂ ಪರಿಣಾಮವಾಗಿದೆ. 

ಸದ್ಯ ರಾಜ್ಯದಲ್ಲಿ 100 ಸೀಟುಗಳನ್ನು ಹೊಂದಿರುವ ಕಾಂಗ್ರೆಸ್ 6 ಬಿಎಸ್ ಪಿ, 12 ಪಕ್ಷೇತರ ಅಭ್ಯರ್ಥಿಗಳ ಬೆಂಬಲ ಪಡೆದು ಸರ್ಕಾರ ರಚಿಸಿದ್ದು, ಅನುಗಾಡುವ ಸ್ಥಿತಿ ಎದುರಾಗಿದೆ. 

ರಾಜಸ್ಥಾನ ಕಾಂಗ್ರೆಸ್ ಕೆಲ ನಾಯಕರೂ ಕೂಡ ಪೈಲಟರ್ ರಾಜೀನಾಮೆ ಬಗ್ಗೆ ಹೇಳಿಕೆ ನೀಡಿದ್ದು, ಅಧಿಕೃತ ಮೂಲಗಳು ಮಾತ್ರ ಖಚಿತಪಡಿಸಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು