
ತಿರುವನಂತಪುರ(ನ.07): ಮದ್ಯಪಾನ ಹಾಗೂ ಮಾದಕ ವಸ್ತುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇರಳ ಸರ್ಕಾರ ಆರಂಭಿಸಲಿರುವ ‘ವಿಮುಕ್ತಿ’ ಹೆಸರಿನ ಜನಜಾಗೃತಿ ಆಂದೋಲನದ ಉದ್ಘಾಟನಾ ಸಮಾರಂಭ ನ. 20ರಂದು ನಡೆಯಲಿದ್ದು ಈ ಸಮಾರಂಭಕ್ಕೆ ಸಚಿನ್ ತೆಂಡೂಲ್ಕರ್ ಆಗಮಿಸಲಿದ್ದಾರೆ.
ಈ ಅಭಿಯಾನಕ್ಕೆ ಈಗಾಗಲೇ ಸಚಿನ್ ತೆಂಡೂಲ್ಕರ್ ಅವರು ಕೇರಳ ಸರ್ಕಾರದ ವತಿಯಿಂದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಉದ್ಘಾಟನಾ ಸಮಾರಂಭಕ್ಕೆ ಹಾಜರಾಗಲಿದ್ದಾರೆಂದು ಕೇರಳದ ಅಬಕಾರಿ ಸಚಿವ ಟಿ.ಪಿ. ರಾಮಕೃಷ್ಣನ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.