ರುದ್ರೇಶ್ ಹತ್ಯೆ: ರಾಜ್ಯ ಸರ್ಕಾರಕ್ಕೆ ಸದಾನಂದಗೌಡ ಎಚ್ಚರಿಕೆ

Published : Nov 06, 2016, 01:00 PM ISTUpdated : Apr 11, 2018, 12:51 PM IST
ರುದ್ರೇಶ್ ಹತ್ಯೆ: ರಾಜ್ಯ ಸರ್ಕಾರಕ್ಕೆ ಸದಾನಂದಗೌಡ ಎಚ್ಚರಿಕೆ

ಸಾರಾಂಶ

ರಾಜ್ಯದಲ್ಲಿ ಒಂದೇ ರೀತಿಯ ಹತ್ಯೆಗಳು ನಡೆಯುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಈ ಹತ್ಯೆಗಳಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು ಇದೆ ಎಂಬ ಸಂಶಯ ಮೂಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೇಳಲೇ ಬೇಕಾಗುತ್ತದೆ. ಹೀಗಾಗಿ, ಸಂಪೂರ್ಣ ಮಾಹಿತಿಯನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದು ಡಿವಿಎಸ್ ತಿಳಿಸಿದ್ದಾರೆ.

ಬೆಂಗಳೂರು(ನ.06): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಸೇರಿದಂತೆ ಸಂಘ ಪರಿವಾರದ   ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಒಂದೇ ರೀತಿಯ ಹತ್ಯೆಗಳು ನಡೆಯುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಈ ಹತ್ಯೆಗಳಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು ಇದೆ ಎಂಬ ಸಂಶಯ ಮೂಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೇಳಲೇ ಬೇಕಾಗುತ್ತದೆ. ಹೀಗಾಗಿ, ಸಂಪೂರ್ಣ ಮಾಹಿತಿಯನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದು ಡಿವಿಎಸ್ ತಿಳಿಸಿದ್ದಾರೆ.

ಭಯ ಹುಟ್ಟಿಸುವ ರೀತಿಯಲ್ಲಿ ಹತ್ಯೆ ಮಾಡಲಾಗುತ್ತಿದೆ. ಇದು ಮುಂದುವರಿದರೆ ರಾಜ್ಯದ ಜನ ರೊಚ್ಚಿಗೆಳಲಿದ್ದಾರೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಇಲ್ಲವೇ ಪರಿಸ್ಥಿತಿ ಎದುರಿಸಬೇಕಾದೀತು ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!