ಸದ್ಗುರು ನದಿ ರ್ಯಾಲಿ: ಇಂದು ಮೈಸೂರಿನಲ್ಲಿ ಅಭಿಯಾನ

Published : Sep 08, 2017, 08:34 AM ISTUpdated : Apr 11, 2018, 01:09 PM IST
ಸದ್ಗುರು ನದಿ ರ್ಯಾಲಿ: ಇಂದು ಮೈಸೂರಿನಲ್ಲಿ ಅಭಿಯಾನ

ಸಾರಾಂಶ

ಸೆ.3ರಂದು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಚಾಲನೆಗೊಂಡ ಯಾನವು ಇಂದು ಮೈಸೂರು ತಲುಪಲಿದೆ.

ಬೆಂಗಳೂರು(ಸೆ.08): ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ದೇಶದ ನದಿಗಳನ್ನು ಉಳಿಸಲು ಆರಂಭವಾಗಿರುವ ಆಂದೋಲನ ಇಂದು ಮೈಸೂರು ಹಾಗೂ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ.

ದೇಶದಲ್ಲಿನ ನದಿಗಳ ಉಳಿವಿಗಾಗಿ ಅರಿವು ಮೂಡಿಸಲು ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ ಹಮ್ಮಿಕೊಂಡಿರುವ ‘ನದಿಗಳಿಗಾಗಿ ರ್ಯಾಲಿ’ (ರ್ಯಾಲಿ ಫಾರ್ ರಿವರ್) ಅಭಿಯಾನವು ರಾಜ್ಯಕ್ಕೆ ಆಗಮಿಸಿದ್ದು, ಇಂದು ಮೈಸೂರಿನಲ್ಲಿ ಹಾಗೂ ಶನಿವಾರ  ಬೆಂಗಳೂರಿನಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ.

ಸೆ.3ರಂದು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಚಾಲನೆಗೊಂಡ ಯಾನವು ಇಂದು ಮೈಸೂರು ತಲುಪಲಿದೆ.

ಇಂದು ಸಂಜೆ 6 ಗಂಟೆಯಿಂದ 8 ಗಂಟೆವರೆಗೆ ಸದ್ಗುರು ನೇತೃತ್ವದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ವೇಳೆ ಮುಖ್ಯ ಅತಿಥಿಯಾಗಿ ರಾಣಿ ಪ್ರಮೋದಾ ದೇವಿ ಒಡೆಯರ್ ಭಾಗವಹಿಸಲಿದ್ದಾರೆ. ಇದೇ ವೇಳೆ ಧರ್ಮಸ್ಥಳದ ಧರ್ಮಾಧ್ಯಕ್ಷ ವೀರೇಂದ್ರ ಹೆಗ್ಗಡೆ, ಸಂಸದ ಪ್ರತಾಪ್ ಸಿಂಹ, ಸ್ಥಳೀಯ ಶಾಸಕರು ಭಾಗವಹಿಸಲಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ನೆರೆಯಲಿದಾರೆ ಎಂದು ಆಯೋಜಕರು ಮಾಹಿತಿ  ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು