
ನವದೆಹಲಿ (ಜ.10): ಬೆಂಕಿ ಅನಾಹುತದಿಂದ ಮುಂಬೈ ಹಾಗೂ ಬೆಂಗಳೂರು ಸೇರಿದಂತೆ ಪಬ್, ರೆಸ್ಟೋರೆಂಟ್'ಗಳಲ್ಲಿ 20 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡ ಹಿನ್ನಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದ ದೇಶಾದ್ಯಂತ ಇರುವ ಪಬ್'ಗಳನ್ನು ಮುಚ್ಚಲು ನಾಗರೀಕ ಸಚಿವಾಲಯ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಸುರಕ್ಷಾ ಕ್ರಮಗಳನ್ನು ಅನುಸರಿಸದ ಪಬ್'ಗಳನ್ನು ಮುಚ್ಚಲು ಬಿಬಿಎಂಪಿ ಕಾರ್ಯಗತವಾಗಿದೆ. ಈಗಾಗಲೇ 57 ಪಬ್'ಗಳನ್ನು ಮುಚ್ಚಲು ಸೂಚಿಸಿದೆ. 70 ಕ್ಕೂ ಹೆಚ್ಚು ಪಬ್, ರೆಸ್ಟೋರೆಂಟ್'ಗಳಿಗೆ ನೋಟಿಸ್ ನೀಡಿದೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸರ್ಕಾರದ ಎಲ್ಲಾ ಜವಾಬ್ದಾರಿಗಳನ್ನು ಒಬ್ಬರೇ ನಿಭಾಯಿಸಲು ಸಾಧ್ಯವಿಲ್ಲ. ಪಬ್, ಬಾರ್;ಗಳನ್ನು ನಡೆಸುತ್ತಿರುವವರು ಜವಾಬ್ದಾರಿಗಳನ್ನು ನಿಭಾಯಿಸಬೇಕು. ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.