
ನವದೆಹಲಿ(ಸೆ.30): ಕಲೆ ಮತ್ತು ಭಯೋತ್ಪಾದನೆಯನ್ನು ಒಂದೇ ರೀತಿಯಲ್ಲಿ ನೋಡಬಾರದು. ಪಾಕಿಸ್ತಾನಿ ಕಲಾವಿದರು ಕೇವಲ ಕಲಾವಿದರೆಷ್ಟೇ ಹೊರತು ಅವರೇನು ಭಯೋತ್ಪಾದಕರಲ್ಲ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ.
ಪಾಕ್'ನಿಂದ ಉರಿ ದಾಳಿ ನಡೆದ ಬೆನ್ನಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್'ಎಸ್)ಯು ಕೂಡಲೇ ಪಾಕಿಸ್ತಾನಿ ಕಲಾವಿದರು ಭಾರತ ತೊರೆಯುವಂತೆ ಎಚ್ಚರಿಕೆ ನೀಡಿತ್ತು. ಈ ಸಂಬಂಧ ಪ್ರತಿಕ್ರಿಯಿಸಿರುವ ಸಲ್ಮಾನ್, ಉರಿಯಲ್ಲಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದವರು ಭಯೋತ್ಪಾದಕರು. ಆದರೆ ಪಾಕಿಸ್ತಾನಿ ಕಲಾವಿದರು ಭಯೋತ್ಪಾದಕರಲ್ಲ. ಭಯೋತ್ಪಾದನೆ ಹಾಗೂ ಕಲೆಗೆ ಸಾಕಷ್ಟು ವ್ಯತ್ಯಾಸವಿದೆ. ಅವೆರಡೂ ಒಂದೇ ಅಲ್ಲ ಎಂದು ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನಗಳಲ್ಲಿ ಶಾಂತಿ ನೆಲೆಸಲಿ ಎಂದು ಆಶಿಸುತ್ತೇನೆ ಎಂದು ಬಾಲಿವುಡ್ ನಟ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.