
ನವದೆಹಲಿ: ನ್ಯಾಯಾಲಯದ ಹೊರಗೆ ಬಾಬ್ರಿ ಮಸೀದಿ-ರಾಮಮಂದಿರ ವಿವಾದ ಇತ್ಯರ್ಥ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.
ತನ್ನ ಒಪ್ಪಿಗೆಯಿಲ್ಲದೇ ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಮೌಲಾನ ಸಲ್ಮಾನ್ ನದ್ವಿಯವರನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ವಜಾಗೊಳಿಸಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯರಾಗಿರುವ ಸಲ್ಮಾನ್ ನದ್ವಿ, ಎರಡು ದಿನಗಳ ಹಿಂದೆ ರವಿಶಂಕರ್ ಗುರೂಜಿಯನ್ನು ಭೇಟಿಯಾಗಿ ಅಯೋಧ್ಯೆ ವಿಚಾರವಾಗಿ ಮಾತುಕತೆ ನಡೆಸಿದ್ದರು.
ಅಯೋಧ್ಯೆ ವಿವಾದ ಕುರಿತಂತೆ ನ್ಯಾಯಾಲಯದ ತೀರ್ಮಾನವವನ್ನೇ ನೆಚ್ಚಿಕೊಳ್ಳುವ ತನ್ನ ನಿಲುವನ್ನು ಪುನರುಚ್ಚರಿಸಿದ ಮಂಡಳಿ, ಸಲ್ಮಾನ್ ನದ್ವಿಯವರು ಮಂಡಳಿಯ ನಿಲುವಿನ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.
ಮೌಲಾನ ಸಲ್ಮಾನ್ ನದ್ವಿಯವರನ್ನು ಮಂಡಳಿಯಿಂದ ವಜಾಗೊಳಿಸಿರುವ ಬಗ್ಗೆ ಆರ್ಟ್ ಆಫ್ ಲಿವಿಂಗ್’ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಕೂಡಾ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.