
ನವದೆಹಲಿ(ನ.12): ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಶುಕ್ರವಾರ ರಾತ್ರಿ ಉಪ್ಪಿನ ದಾಸ್ತಾನು ಕೊರತೆಯ ಬಗ್ಗೆ ಊಹಾಪೋಹಗಳು ಹರಡಿದುದರಿಂದ ಜನರು ಆತಂಕಿತರಾದರು. ಹೀಗಾಗಿ ಮಾರುಕಟ್ಟೆಗಳಿಗೆ ಧಾವಿಸಿದ ಗ್ರಾಹಕರು ಹೆಚ್ಚಿನ ಬೆಲೆ ನೀಡಿ, ಉಪ್ಪು ಸಂಗ್ರಹಿಸಿದರು. ಘಟನೆ ನಡೆದ ಮೊರಾದಾಬಾದ್ನ ಕತ್ರಾನಾಜ್ ಪ್ರದೇಶಕ್ಕೆ ಪೊಲೀಸರನ್ನು ಕಳುಹಿಸಲಾಗಿದೆ ಎಂದು ಕೊತ್ವಾಲಿ ಪ್ರದೇಶದ ಪೊಲೀಸ್ ಅಕಾರಿ ಪೂನಂ ಮಿಶ್ರಾ ಹೇಳಿದ್ದಾರೆ.
ಕರ್ಬುಲ ಮಾರುಕಟ್ಟೆ ಮತ್ತು ಮುಕ್ಬಾರ ಪ್ರದೇಶದಲ್ಲೂ ಊಹಾಪೋಹಗಳು ಹರಡಿದ್ದವು. ಕೆಲವೆಡೆಗಳಲ್ಲಿ ಚಿಲ್ಲರೆ ಇಲ್ಲದ ಕಾರಣ, 3 ಕಿಗ್ರಾಂ ಉಪ್ಪುಗೆ 500 ಸ್ವೀಕರಿಸಲಾಗಿದೆ. ದೆಹಲಿಯಲ್ಲೂ ಕೆಲವೆಡೆ ಹೆಚ್ಚಿನ ಬೆಲೆಗೆ ಉಪ್ಪು ಮಾರಾಟ ಮಾಡುತ್ತಿದ್ದ ಬಗ್ಗೆ ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.