ಮಾಯಾ ಬಳಿಕ ಕೈ ಪಡೆಗೆ ಮತ್ತೊಂದು ಪಕ್ಷ ಶಾಕ್?

Published : Sep 27, 2018, 10:04 AM IST
ಮಾಯಾ ಬಳಿಕ ಕೈ ಪಡೆಗೆ ಮತ್ತೊಂದು ಪಕ್ಷ ಶಾಕ್?

ಸಾರಾಂಶ

ಮಾಯಾವತಿ ಬಳಿಕ ಕಾಂಗ್ರೆಸ್ ಗೆ ಶಾಕ್ ನೀಡಲು ಮತ್ತೊಂದು ಪಕ್ಷ ಮುಂದಾಗಿದೆ. ಮಹಾಘಟಬಂಧನ್ ದಿಂದ ಸಮಾಜವಾದಿ ಪಕ್ಷ ಕೂಡ ಮತ್ರಿ ಕಡಿದುಕೊಳ್ಳುವ ಸುಳಿವು ನೀಡಿದೆ. 

ಭೋಪಾಲ್‌: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮಹಾಘಟಬಂಧನ್‌ದಿಂದ ಹೊರಬಂದ ಬೆನ್ನಲ್ಲೇ, ಸಮಾಜವಾದಿ ಪಕ್ಷ ಕೂಡ ಮತ್ರಿ ಕಡಿದುಕೊಳ್ಳುವ ಸುಳಿವು ನೀಡಿದೆ. 

ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್‌ ಮಹಾ ಮೈತ್ರಿಗೆ ಮುಗಿಬಿದ್ದಿರುವುದನ್ನು ಪ್ರಶ್ನಿಸಿರುವ ಸಮಾಜವಾದಿ ಪಕ್ಷ, ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

ಇನ್ನೊಂದೆಡೆ ಬಿಎಸ್‌ಪಿ ಈಗಾಗಲೇ 22 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಉತ್ತರ ಪ್ರದೇಶಕ್ಕೆ ಹೊಂದಿಕೊಂಡಿರುವ ಮಧ್ಯ ಪ್ರದೇಶದ ಗಡಿ ಜಿಲ್ಲೆಗಳಲ್ಲಿ ಸಮಾಜವಾದಿ ಪಕ್ಷ ಜನ ಬೆಂಬಲವನ್ನು ಹೊಂದಿದ್ದು, ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಸೆ.29 ಮತ್ತು 30ರಂದು ರಾರ‍ಯಲಿಗಳನ್ನು ಕೈಗೊಳ್ಳಲಿದ್ದಾರೆ. ಇದೇ ವೇಳೆ ಇತರ ಪಕ್ಷಗಳ ಜೊತೆಗೂಡಿ ಮಹಾಮೈತ್ರಿಕೂಟ ರಚಿಸುವ ವಿಶ್ವಾಸವನ್ನು ಕಾಂಗ್ರೆಸ್‌ ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ