ನಿರ್ದೇಶಕ ಎಸ್‌.ನಾರಾಯಣ್‌ ಬಂಧನ, ಬಿಡುಗಡೆ

Published : Apr 06, 2019, 11:58 AM IST
ನಿರ್ದೇಶಕ ಎಸ್‌.ನಾರಾಯಣ್‌ ಬಂಧನ, ಬಿಡುಗಡೆ

ಸಾರಾಂಶ

ಸ್ಯಾಂಡಲ್ ವುಡ್ ನಿರ್ದೇಶಕ ಎಸ್ ನಾರಾಯಣ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಕೊಟ್ಯಂತರ ರು. ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ಬಿಡುಗಡೆ ಮಾಡಲಾಗಿದೆ. 

ಬೆಂಗಳೂರು :  ಐಡಿಬಿಐ ಬ್ಯಾಂಕ್‌ಗೆ 3.10 ಕೋಟಿ ಸಾಲ ಮರು ಪಾವತಿಸದ ಪ್ರಕರಣದ ಸಂಬಂಧ ವಾರಂಟ್‌ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಬಸವೇಶ್ವರನಗರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್‌.ನಾರಾಯಣ್‌ ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಂಧಮುಕ್ತರಾಗಿದ್ದಾರೆ.

2013ರಲ್ಲಿ ಬ್ಯಾಂಕ್‌ನಿಂದ ಸಿನಿಮಾ ನಿರ್ಮಾಣ ಸಲುವಾಗಿ ನಾರಾಯಣ್‌ ಸಾಲ ಪಡೆದಿದ್ದರು. ಆದರೆ ಸಕಾಲಕ್ಕೆ ಸಾಲದ ಕಂತು ಕಟ್ಟದ ಕಾರಣಕ್ಕೆ ಅವರ ವಿರುದ್ಧ ನ್ಯಾಯಾಲಯದಲ್ಲಿ ಬ್ಯಾಂಕ್‌ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು, ವಿಚಾರಣೆಗೆ ಆಗಮಿಸುವಂತೆ ನಿರ್ದೇಶಕರಿಗೆ ನೋಟಿಸ್‌ ನೀಡಿತ್ತು.

ಈ ನೋಟಿಸ್‌ಗೂ ಅವರು ಉತ್ತರಿಸದ ಹೋದ ಪರಿಣಾಮ ವಾರಂಟ್‌ ಜಾರಿಯಾಯಿತು. ನ್ಯಾಯಾಲಯದ ಆದೇಶದಂತೆ ಕಾರ್ಯಾಚರಣೆಗಿಳಿದ ಪೊಲೀಸರು, ಬೆಳಗ್ಗೆ ನಾರಾಯಣ್‌ ಅವರನ್ನು ಮಲ್ಲೇಶ್ವರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆನಂತರ ನಾರಾಯಣ್‌ ಅವರಿಗೆ ಜಾಮೀನು ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ