'ಮನಮೆಚ್ಚಿದ ಹುಡುಗಿ' ಚಿತ್ರದ ನಿರ್ದೇಶಕ ಇನ್ನಿಲ್ಲ

Published : Oct 29, 2018, 06:04 PM ISTUpdated : Oct 29, 2018, 06:16 PM IST
'ಮನಮೆಚ್ಚಿದ ಹುಡುಗಿ' ಚಿತ್ರದ ನಿರ್ದೇಶಕ ಇನ್ನಿಲ್ಲ

ಸಾರಾಂಶ

ಸ್ಯಾಂಡಲ್​​ವುಡ್​ನ  30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದ ‘ಧ್ರುವತಾರೆ’ ನಿರ್ದೇಶಕ ವಿಧಿವಶರಾಗಿದ್ದಾರೆ. ಯಾರವರು? ಇಲ್ಲಿದೆ ವಿವರ

ಬೆಂಗಳೂರು, [ಅ.29]: ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್  ಇಂದು ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ  ಬಳಲುತ್ತಿದ್ದ ರಾಜಶೇಖರ್, ಇಂದು [ಸೋಮವಾರ] ಸಂಜೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

ಸ್ಯಾಂಡಲ್​ವುಡ್ ನ ಸೃಜನಶೀಲ ನಿರ್ದೇಶಕ ಅಂತಲೇ ಕರೆಸಿಕೊಂಡಿದ್ದ ಎಂ.ಎಸ್​. ರಾಜಶೇಖರ್ ಅವರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ರಾಜ್​ಶೇಖರ್ ನಿರ್ದೇಶನದ ಬಹುತೇಕ ಸಿನಿಮಾಗಳು ಸಕ್ಸಸ್​ ಕಂಡಿವೆ.  ರಥಸಪ್ತಮಿ, ಮನಮೆಚ್ಚಿದ ಹುಡುಗಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು, ಮಣ್ಣಿನ ದೋಣಿ, ಡಕೋಟ ಎಕ್ಸ್​ಪ್ರೆಸ್​.. ರಾಜ್​ಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು