ಸಂದೇಶ್‌ ಸ್ವಾಮಿ, ಸಂದೇಶ್‌ ಬಿಜೆಪಿ ಸೇರ್ಪಡೆ

Published : Mar 31, 2018, 09:34 AM ISTUpdated : Apr 11, 2018, 12:51 PM IST
ಸಂದೇಶ್‌ ಸ್ವಾಮಿ, ಸಂದೇಶ್‌ ಬಿಜೆಪಿ ಸೇರ್ಪಡೆ

ಸಾರಾಂಶ

ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಮಾಜಿ ಉಪ ಮೇಯರ್‌ ಮಹದೇವಪ್ಪ, ವಿ.ಪ. ಸದಸ್ಯ ಸಂದೇಶ್‌ ನಾಗರಾಜ್‌ ಅವರ ಪುತ್ರ ಸಂದೇಶ್‌, ಜೆಡಿಎಸ್‌ ಮುಖಂಡ ರಾಮಕೃಷ್ಣ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು.

ಮೈಸೂರು: ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಮಾಜಿ ಉಪ ಮೇಯರ್‌ ಮಹದೇವಪ್ಪ, ವಿ.ಪ. ಸದಸ್ಯ ಸಂದೇಶ್‌ ನಾಗರಾಜ್‌ ಅವರ ಪುತ್ರ ಸಂದೇಶ್‌, ಜೆಡಿಎಸ್‌ ಮುಖಂಡ ರಾಮಕೃಷ್ಣ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ನವಶಕ್ತಿ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬಿಜೆಪಿಯ ಬಾವುಟ ನೀಡುವ ಮೂಲಕ ಬಿಜೆಪಿಗೆ ಬರ ಮಾಡಿಕೊಳ್ಳಲಾಯಿತು.

ಈ ವೇಳೆ ಸಂದೇಶ್‌ ಸ್ವಾಮಿ ಅವರು ಅಮಿತ್‌ ಶಾ ಅವರಿಗೆ ಕೃಷ್ಣನ ವಿಗ್ರಹ, ಹಾರ ಮತ್ತು ಶಾಲು ಹೊದಿಸಿ ಸನ್ಮಾನಿಸಿದರು. ಮಾ.29ರಂದು ಸಂದೇಶ್‌ ಸ್ವಾಮಿ ಅವರು ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ರಾಜ್ಯ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
ಎಚ್‌ಎಎಲ್‌ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್‌ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ