
ಮೈಸೂರು (ಡಿ.22):ಕನ್ನಡ ಚಲನ ಚಿತ್ರರಂಗ ಬೆಚ್ಚಿ ಬೀಳಿಸುವ ಸ್ಫೋಟಕ ಸುದ್ದಿಯೊಂದು ಬಯಲಾಗಿದೆ.
ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದ ಯುವತಿ ಸ್ಯಾಂಡಲ್ವುಡ್' ಸ್ಟಾರ್ ನಟರಿಬ್ಬರ ಹೆಸರನ್ನು ಬಾಯಿ ಬಿಟ್ಟಿದ್ದಾಳೆ. ಸ್ಯಾಂಡಲ್'ವುಡ್ ಸ್ಟಾರ್ ನಟರಾದ ಸಾಧು ಕೋಕಿಲಾ, ಮಂಡ್ಯ ರಮೇಶ್ ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಈ ನಟರು ಇಲ್ಲಿಗೆ ಬರುತ್ತಿದ್ದರು. ಅಲ್ಲಿ ಇರಲು ಕೂಡ ತನಗೆ ಹಿಂಸೆಯಾಗುತ್ತಿತ್ತು. ಅವರು ಹೇಳಿದಂತೆ ಕೇಳಬೇಕಿತ್ತು. ಇಲ್ಲವಾದಲ್ಲಿ ಕೆಲಸದಿಂದ ತೆಗೆಯುವುದಾಗಿ ಹೆದರಿಸುತ್ತಿದ್ದರು. ಪೊಲೀಸರಿಗೆ ದೂರು ನೀಡುವುದಾಗಿ ಕೂಡ ಹೇಳುತ್ತಿದ್ದರು ಎಂದು ಹೇಳಿದ್ದಾಳೆ.
ಆದರೆ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ ಮಂಡ್ಯ ರಮೇಶ್ ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ತಮಗೂ ಈ ಕೇಸ್'ಗೂ ಯಾವುದೇ ರೀತಿಯಾದ ಸಂಬಂಧವಿಲ್ಲವೆಂದು ಹೇಳಿದ್ದಾರೆ.
ಈ ಅಪಾದನೆ ನನಗೆ ನೋವುಂಟು ಮಾಡಿದೆ ಎಂದಿದ್ದಾರೆ. ನನ್ನ ಜವಾಬ್ದಾರಿ ಕೆಲಸ ಏನು ಎನ್ನುವ ಬಗ್ಗೆ ನನಗೆ ಅರಿವಿದೆ. ಉದ್ಘಾಟನೆ ಆದ ಮೇಲೆ ಆ ಪಾರ್ಲರ್'ಗೆ ನಾನು ಒಂದೇ ಬಾರಿ ಹೋಗಿದ್ದೆ.
ಆರೋಪ ಮಾಡುತ್ತಿರುವ ಹುಡುಗಿಯ ಪರಿಚಯವೂ ಕೂಡ ನನಗೆ ಇಲ್ಲ. ಎಲ್ಲರೊಂದಿಗೂ ಕೂಡ ನಾನು ಅತ್ಯಂತ ಸ್ನೇಹದಿಂದ ಇರುತ್ತೇನೆ. ಜನರು ನನ್ನನ್ನು ಪ್ರೀತಿಸುತ್ತಾರೆ. ಆದರೆ ಆ ಹುಡುಗಿ ಆರೋಪ ಮಾಡುತ್ತಿರುವುದು ಸುಳ್ಳು, ಇದರ ಹಿಂದೆ ಯಾವುದೇ ರೀತಿಯಾದ ಒತ್ತಡ ಇರಬಹುದು ಎಂದು ಹೇಳಿದ್ದಾರೆ.
ಒಡನಾಡಿ ಸಂಸ್ಥೆಯೊಂದಿಗೆ ನನಗೆ ಉತ್ತಮ ಬಾಂಧವ್ಯವಿದೆ. ಸ್ಪಾ ಓನರ್ ರಾಜೇಶ್ ಮತ್ತು ಹುಡುಗಿಯ ನಡುವಿನ ವೈಮನಸ್ಸಿನಿಂದ ಈ ಆರೋಪ ಮಾಡಿರಬಹುದು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.