
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ಇಡೀ ಕಾಂಗ್ರೆಸ್ ಎದ್ದು ನಿಂತರೂ ಸಂಘ ಪರಿವಾರವನ್ನು ಏನೂ ಮಾಡಲಾಗದು. ಇನ್ನು ವಿಚಾರವಾದಿಗಳ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಈಶ್ವರಪ್ಪ ಗುಡುಗಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಡೆಸಿದ ಪ್ರತಿರೋಧ ಸಮಾವೇಶದಲ್ಲಿ ಹತ್ಯೆಯಲ್ಲಿ ಸಂಘ ಪರಿಹಾರದ ಕೈವಾಡದ ಬಗ್ಗೆ ಆರೋಪ ಮಾಡಲಾಗಿದೆ. ಸಂಘ ಪರಿವಾರ ಯಾವಾಗಲೂ ದೇಶಭಕ್ತಿಯನ್ನು ತುಂಬುವ ಕೆಲಸ ಮಾಡುತ್ತದೆ. ಎಲ್ಲಿಯೂ ಕೊಲೆ, ಸುಲಿಗೆಯಂತ ಕೆಲಸ ಮಾಡುವುದಿಲ್ಲ. ಗೌರಿ ಲಂಕೇಶ್ ವಿಚಾರ ಮತ್ತು ಸಂಘ ಪರಿವಾರದ ವಿಚಾರಗಳು ಬೇರೆ ಬೇರೆ ಇರಬಹುದು. ಹಾಗೆಂದು ಸಂಘ ಪರಿವಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈ ಹಿಂದೆ ಮಹಾತ್ಮಗಾಂಧಿ ಹತ್ಯೆ ಸಂದರ್ಭದಲ್ಲೂ ಇದೇ ರೀತಿ ಆರ್ಎಸ್ಎಸ್ ಮೇಲೆ ಆರೋಪಿಲಾಗಿತ್ತು. ಆದರೆ ಏನಾಯಿತು? ಎಂದು ಖಾರವಾಗಿ ಪ್ರಶ್ನಿಸಿದರು.
ಕಲಬುರ್ಗಿ ಹತ್ಯೆ ಆರೋಪವನ್ನೂ ಸಂಘದವರ ಮೇಲೆ ಹಾಕಲಾಗುತ್ತಿದೆ. ಹಾಗಿದ್ದ ಮೇಲೆ ಹತ್ಯೆಕೋರರನ್ನು ಸರ್ಕಾರ ಏಕೆ ಹಿಡಿಯುತ್ತಿಲ್ಲ? ಸರ್ಕಾರಕ್ಕೆ ಸಾಮರ್ಥ್ಯ ಇಲ್ಲವೇ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.