
ಬೆಂಗಳೂರು (ಸೆ.29): ಕುರುಬ ಸಮಾಜಕ್ಕೆ ಸಿದ್ದರಾಮಯ್ಯನವರೇ ನಾಯಕರು. ಕೆ.ಎಸ್.ಈಶ್ವರಪ್ಪನವರು ಕುರುಬ ಸಮಾಜದ ಅಭಿವೃದ್ಧಿಗೆ ಯಾವತ್ತೂ ಕೆಲಸ ಮಾಡಿಲ್ಲ. ಇದೀಗ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿರುವುದು ಅರ್ಥಹೀನ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಾಗ್ದಾಳಿ ನಡೆಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುತಿಸಿಕೊಳ್ಳುವ ಉದ್ದೇಶದಿಂದ ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದಾರೆ. ಬಿಜೆಪಿ ಒಳಜಗಳದಿಂದ ಬ್ರಿಗೇಡ್ ರಚನೆಯಾಗಿದೆ. ಆದರೆ ಈಶ್ವರಪ್ಪ ಬಿಜೆಪಿಯಲ್ಲಿ ಸಿಎಂ ಆಗಲು ಯಾವತ್ತಿಗೂ ಸಾಧ್ಯವಿಲ್ಲ ಎಂದು ಟೀಕಿಸಿದರು.
ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಲ್ಲಿ ಅ.1ರಂದು ಹಾವೇರಿಯಲ್ಲಿ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಕುರುಬ ಸಮಾಜದ ಜನ ಈಶ್ವರಪ್ಪ ಅವರ ಮಾತಿಗೆ ಮರುಳಾಗಬಾರದು. ಬಿಜೆಪಿಯ ಒಳಜಗಳಕ್ಕೆ ಅವರನ್ನು ಉಪಯೋಗಿಸಿಕೊಳ್ಳಬಾರದು. ಇದು ಒಂದು ರೀತಿ ರಾಜಕೀಯ ತಂತ್ರಗಾರಿಕೆ. ಹಾಗಾಗಿ ಹಾವೇರಿ ಸಮಾವೇಶಕ್ಕೆ ಕುರುಬ ಸಮಾಜ ಬಹಿಷ್ಕಾರ ಹಾಕಬೇಕು ಎಂದು ವರ್ತೂರು ಪ್ರಕಾಶ್ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.