
ಬೆಂಗಳೂರು: ಮಲ್ಲೇಶ್ವರದ ಪ್ರಸಿದ್ಧಿ ಚಿಟ್ಫಂಡ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾ ತಂಡದ ವಿರುದ್ಧ ನಟಿ ಸಂಜನಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶುಕ್ರವಾರ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅವರು ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಆಯುಕ್ತರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜನಾ, ಸಿಐಡಿ ಅಧಿಕಾರಿಗಳು ತ್ವರಿತವಾಗಿ ಪ್ರಕರಣದ ತನಿಖೆ ನಡೆಸುತ್ತಿಲ್ಲ. ಆರೋಪಿಗಳಿಗೆ ಸಿಐಡಿ ಅಧಿಕಾರಿಗಳು ಗೌರವ ಕೂಡವ ಮೂಲಕ ದೂರುದಾರನ್ನೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೂರುದಾರರನ್ನೇ ಸಾಕ್ಷಿ ಹುಡುಕಿ ಕೊಡುವಂತೆ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು ಬೇಜವಾಬ್ದಾರಿಯಾಗಿ ಕೇಳುತ್ತಾರೆ.ಪ್ರಕರಣದ ತನಿಖೆ ಬಗ್ಗೆಮಾಹಿತಿ ಪಡೆಯಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಸಂಜನಾ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.