
ಬೆಂಗಳೂರು(ಅ.17): ಹಾಲು ಗಲ್ಲದ ಆ ಕಂದನಿಗೆ ಇನ್ನು 3 ವರ್ಷ. ಈಜಿಪುರ ಕಟ್ಟಡ ಕುಸಿತದಲ್ಲಿ ಅದೃಷ್ಟವಶಾತ್ ಬದುಕುಳಿದ ಸಂಜನಾ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಂಜನಾಗೆ ಚಿಕಿತ್ಸೆ ನೀಡಲಾಗುತ್ತಿದೆ. 6 ಕೋಟಿ ಕನ್ನಡಿಗರ ಹಾರೈಕೆ ಒಂದೇ ಬದುಕಿ ಬಾ ಸಂಜನಾ.
ಆ ಮಗುವಿಗೆ ಕೇವಲ 3 ವರ್ಷ. ಹೊರ ಜಗತ್ತಿನ ಪರಿವೇ ಇಲ್ಲ. ತನ್ನ ತಂದೆ ತಾಯಿಯೇ ಸರ್ವಸ್ವ. ಆದರೆ ಆ ಸರ್ವಸ್ವವನ್ನು ಕಣ್ಣಮುಂದೆಯೇ ಕಳೆದುಕೊಂಡ ನತದೃಷ್ಟ ಬಾಲೆ. ಆಟವಾಡುವ ಸಮಯದಲ್ಲಿ ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.
ನಿನ್ನೆ ಬೆಳಗ್ಗೆ ಸಂಭವಿಸಿದ ಈಜೀಪುರ ಕಟ್ಟಡ ಕುಸಿತ ದುರಂತದಲ್ಲಿ ಪವಾಡ ರೀತಿಯಲ್ಲಿ ಬದುಕುಳಿದ ಸಂಜನಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸ್ಫೋಟದ ಬಿಸಿಗೆ ಸಂಜನಾ ದೇಹ ಶೇ.60ರಷ್ಟು ಸುಟ್ಟುಹೋಗಿದೆ. ಹೊರ ಜಗತ್ತಿನ ಪರಿವೇ ಇಲ್ಲದ ಸಂಜನಾ ಬದುಕಿ ಬರಲಿ, ಸಾವು - ಬದುಕಿನ ಯುದ್ಧದಲ್ಲಿ ಸಂಜನಾ ಗೆದ್ದುಬರಲಿ ಎಂಬುದೇ ಎಲ್ಲರ ಆಶಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.