ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ ಏನೀಗ? ವಿಡಿಯೋ ವೈರಲ್

Published : Apr 24, 2018, 08:02 AM IST
ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ ಏನೀಗ? ವಿಡಿಯೋ ವೈರಲ್

ಸಾರಾಂಶ

ನಾನು ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ. ನಿನಗೆ ಏನು ತೊಂದರೆ ಆಗೈತಿ. ಸಮಸ್ಯೆ ಇದ್ದರೆ ಪಟ್ಟಿಕೊಡು! ಇದು ಕಲಘಟಗಿ ಕ್ಷೇತ್ರಕ್ಕೆ ಅಪರೂಪದ ಅತಿಥಿಯಾಗಿರುವ ಶಾಸಕ, ಕಾರ್ಮಿಕ ಸಚಿವ ಸಂತೋಷ ಲಾಡ್‌ ಕಾರ್ಯಕರ್ತನಿಗೊಬ್ಬನಿಗೆ ಹೇಳಿರುವ ಮಾತು. ಈ ವಿಡಿಯೋ ಇದೀಗ ವೈರಲ್‌ ಆಗಿದೆ.  

ಹುಬ್ಬಳ್ಳಿ (ಏ. 24): ನಾನು ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ. ನಿನಗೆ ಏನು ತೊಂದರೆ ಆಗೈತಿ. ಸಮಸ್ಯೆ ಇದ್ದರೆ ಪಟ್ಟಿಕೊಡು!

ಇದು ಕಲಘಟಗಿ ಕ್ಷೇತ್ರಕ್ಕೆ ಅಪರೂಪದ ಅತಿಥಿಯಾಗಿರುವ ಶಾಸಕ, ಕಾರ್ಮಿಕ ಸಚಿವ ಸಂತೋಷ ಲಾಡ್‌ ಕಾರ್ಯಕರ್ತನಿಗೊಬ್ಬನಿಗೆ ಹೇಳಿರುವ ಮಾತು. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಸಂತೋಷ ಲಾಡ್‌ ಮಾತನಾಡುವಾಗ ಕಾರ್ಯಕರ್ತನೊಬ್ಬ ನೀವು ಕಳೆದ ಬಾರಿ ಚುನಾಯಿತರಾದ ಮೇಲೆ ಕ್ಷೇತ್ರಕ್ಕೆ ಬರಲೇ ಇಲ್ಲ ಎಂದು ಪ್ರಶ್ನಿಸಿದ್ದಾನೆ. ಅಷ್ಟಕ್ಕೆ ಕೆಂಡಾಮಂಡಲವಾದ ಸಚಿವರು, ನಾನು ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ. ನಿನಗೆ ಏನು ತೊಂದರೆ. ಸಮಸ್ಯೆ ಇದ್ದರೆ ಪಟ್ಟಿಕೊಡು. ಅವುಗಳನ್ನು ಇತ್ಯರ್ಥ ಪಡಿಸುತ್ತೇನೆ ಎಂದಿದ್ದಾರೆ. ಸಚಿವರ ಉತ್ತರದಿಂದ ಕಾರ್ಯಕರ್ತ ದಂಗಾಗಿ ಕುಳಿತಿದ್ದಾನೆ.

ಈ ಸಭೆ ಯಾವಾಗ ಆಗಿದ್ದು ಗೊತ್ತಿಲ್ಲ. ಆದರೆ ವಿಡಿಯೋ ಇದೀಗ ಫೇಸ್‌ಬುಕ್‌, ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?