ಶರವಣ ಭವನ ಹೊಟೇಲ್ ಮಾಲೀಕ ರಾಜಗೋಪಾಲ್ ಕೈದಿಯಾಗಿ ಸಾವು

Published : Jul 18, 2019, 11:26 AM IST
ಶರವಣ ಭವನ ಹೊಟೇಲ್ ಮಾಲೀಕ ರಾಜಗೋಪಾಲ್ ಕೈದಿಯಾಗಿ ಸಾವು

ಸಾರಾಂಶ

ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇತ್ತೀಚೆಗೆ ಪೊಲೀಸರಿಗೆ ಶರಣಾಗಿದ್ದ 'ಶರವಣ ಹೊಟೇಲ್' ಮಾಲೀಕ ರಾಜಗೋಪಾಲ್ ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಯೇ ಇದ್ದ ಶರವಣ ಮೃತಪಟ್ಟಿದ್ದಾರೆ. 

ಬೆಂಗಳೂರು (ಜೂ.18): 2001ರ ಅಪಹರಣ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇತ್ತೀಚೆಗೆ ಪೊಲೀಸರಿಗೆ ಶರಣಾಗಿದ್ದ 'ಶರವಣ ಹೊಟೇಲ್' ಮಾಲೀಕ ರಾಜಗೋಪಾಲ್ ಇಂದು ಕೊನೆಯುಸಿರೆಳೆದಿದ್ದಾರೆ. 

ಅನಾರೋಗ್ಯದ ನಿಮಿತ್ತ ಜೀವಾವಧಿ ಶಿಕ್ಷೆ ಅನುಭವಿಸಲು ಸಮಯವಕಾಶ ಕೇಳಿದ್ದ ರಾಜಗೋಪಾಲ್‌ ಬೇಡಿಕೆಯನ್ನು ಕೋರ್ಟ್ ನಿರಾಕರಿಸಿದ್ದ ಹಿನ್ನೆಲೆಯಲ್ಲಿ, ಇತ್ತೀಚೆಗೆ ವೆಂಟಿಲೇಟರ್‌ನೊಂದಿಗೆ  ಮದ್ರಾಸ್ ಹೈಕೋರ್ಟಿಗೆ ಅವರು ಹಾಜರಾಗಿದ್ದರು. ಕೃತಕ ಉಸಿರಾಟ ವ್ಯವಸ್ಥೆಯಲ್ಲಿಯೇ ನ್ಯಾಯಾಲಕ್ಕೂ ಶರಣಾಗಿದ್ದರು. ಅತೀವ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಪುನಾಃ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.

ವೆಂಟಿಲೇಟರ್‌ನಲ್ಲೇ ಶರವಣ ಭವನ ರಾಜಗೋಪಾಲ್ ಶರಣು!

2001ರಲ್ಲಿ ತಮ್ಮ ಸುಪ್ರಸಿದ್ಧ ಶರವಣ ಭವನ ಹೊಟೇಲ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಾಂತಕುಮಾರ್ ಅವರ ಪತ್ನಿಯನ್ನು ಮದುವೆಯಾಗಲು ಇಚ್ಛಿಸಿದ್ದರು ರಾಜಗೋಪಾಲ್. ಇದಕ್ಕೆ ಶಾಂತಕುಮಾರ್ ಅಡ್ಡಿಯಾಗಿದ್ದರು ಎನ್ನುವ ಕಾರಣಕ್ಕೆ, ಅವರನ್ನು ಅಪಹರಣಗೈದು, ಕೊಲೆಗೆ ಸುಫಾರಿ ಕೊಟ್ಟಿದ್ದರು. 

'ಸರವಣ ಭವನ'ದಿಂದ ಜೈಲಿಗೆ, ರಾಜಗೋಪಾಲ್ ಜೀವನದಲ್ಲಿ ಏನೇನಾಯ್ತು?

ಈ ಹೀನ ಕೃತ್ಯಕ್ಕೆ ಸಂಬಂಧಿಸಿದಂತೆ ರಾಜಗೋಪಾಲ್ ದೋಷಿ ಎಂದು ಸಾಬೀತಾಗಿದ್ದು, ಒಟ್ಟು 8 ಮಂದಿಗೆ ಸ್ಥಳೀಯ ನ್ಯಾಯಾಲಯ 10 ವರ್ಷ ವಿಧಿಸಿದ ಕಾರಾಗೃಹ ಶಿಕ್ಷೆಯನ್ನು 2009ರಲ್ಲಿ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಪರವರ್ತಿಸಿ, ಆದೇಶಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ