
ಚೆನ್ನೈ(ಫೆ.15): ಶರಣಾಗತಿಗೆ ಕಾಲಾವಕಾಶ ಕೋರಿ ವಿಕೆ ಶಶಿಕಲಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಕೂಡಲೇ ಬೆಂಗಳೂರು ಕೋರ್ಟ್'ಗೆ ತೆರಳಿ ಶರಣಾಗುವಂತೆ ಸೂಚನೆ ನೀಡಿದೆ. ಶಿಕ್ಷೆ ಪ್ರಕಟವಾದ ಕಾರಣ ಶರಣಾಗಲು 4 ವಾರಗಳು ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. ಮನವಿಯನ್ನು ಪರಿಶೀಲಿಸಿದ ಕೋರ್ಟ್ ‘ಪ್ರಕರಣದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ’ ‘ಶರಣಾಗತಿಗೆ ಮತ್ತೆ ಕಾಲಾವಕಾಶ ನೀಡುವುದು ಸಾಧ್ಯವಿಲ್ಲ’' ಎಂದು ತಿರಸ್ಕರಿಸಿದೆ. ಈ ಹಿನ್ನಲೆಯಲ್ಲಿ ಶಶಿಕಲಾ ನಟರಾಜನ್ ಕಾನೂನು ಹೋರಾಟಕ್ಕೆ ಮತ್ತೆ ಹಿನ್ನೆಡೆಯಾಗಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್'ನ ಕೊಠಡಿ ಸಂಖ್ಯೆ 48ರಲ್ಲಿ ಶಶಿಕಲಾ ಸೇರಿದಂತೆ ಮೂವರು ಶರಣಾಗತಿಯ ನಂತರ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.