
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರಕಾರಾಗೃಹ ದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆಯಾಗಿದ್ದ ಶಶಿಕಲಾ ನಟರಾಜನ್ ಅವರು ಅನಾರೋಗ್ಯದಿಂದ ಬಳಲು ತ್ತಿದ್ದು, ಜೈಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಶಿಕಲಾ ಅವರು ರಕ್ತದೊ ತ್ತಡ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಗುರು ವಾರ ಬೆಳಗ್ಗೆ ಅಸ್ವಸ್ಥಗೊಂಡಿ ದ್ದಾರೆ. ಅವರನ್ನು ಜೈಲು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಶಿ ಕಲಾ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ವಿಕ್ಟೋ ರಿಯಾ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇದೆ ಎಂದು ಜೈಲು ಮೂಲಗಳು ತಿಳಿಸಿವೆ. ಆರು ತಿಂಗಳ ಹಿಂದೆ ಕೂಡ ಶಶಿಕಲಾ ಅವರಿಗೆ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆ ಹೆಚ್ಚಾಗಿತ್ತು. ಚಿಕಿತ್ಸೆ ಬಳಿಕ ಶಶಿಕಲಾ ಗುಣ ಮುಖರಾಗಿದ್ದರು.
ಇದೀಗ ಪುನಃ ಅವರು ಖಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.