ಡಿಜಿ ಸತ್ಯನಾರಾಯಣ್ ರಾವ್'ರವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲು ಪ್ಲಾನ್ ಮಾಡುತ್ತಿದೆಯಾ ಸರ್ಕಾರ?

Published : Jul 14, 2017, 05:46 PM ISTUpdated : Apr 11, 2018, 12:51 PM IST
ಡಿಜಿ ಸತ್ಯನಾರಾಯಣ್ ರಾವ್'ರವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲು ಪ್ಲಾನ್ ಮಾಡುತ್ತಿದೆಯಾ ಸರ್ಕಾರ?

ಸಾರಾಂಶ

ಎಐಎಡಿಎಂಕೆ ನಾಯಕಿ ಶಶಿಕಲಾಗೆ ವಿಶೇಷ ವ್ಯವಸ್ಥೆ ಒದಗಿಸಿಕೊಟ್ಟ ಆರೋಪ ಎದುರಿಸುತ್ತಿರುವ ಪರಪ್ಪನ  ಅಗ್ರಹಾರದ ಮಹಾ ನಿರ್ದೇಶಕ ಎಚ್.ಎನ್ ಸತ್ಯನಾರಾಯಣ್ ರಾವ್’ರವರನ್ನು ಕಡ್ಡಾಯ ರಜೆಯ ಮೇರೆಗೆ ಕಳುಹಿಸಲು ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು (ಜು.14): ಎಐಎಡಿಎಂಕೆ ನಾಯಕಿ ಶಶಿಕಲಾಗೆ ವಿಶೇಷ ವ್ಯವಸ್ಥೆ ಒದಗಿಸಿಕೊಟ್ಟ ಆರೋಪ ಎದುರಿಸುತ್ತಿರುವ ಪರಪ್ಪನ  ಅಗ್ರಹಾರದ ಮಹಾ ನಿರ್ದೇಶಕ ಎಚ್.ಎನ್ ಸತ್ಯನಾರಾಯಣ್ ರಾವ್’ರವರನ್ನು ಕಡ್ಡಾಯ ರಜೆಯ ಮೇರೆಗೆ ಕಳುಹಿಸಲು ಸರ್ಕಾರ ಚಿಂತನೆ ನಡೆಸಿದೆ.

ಈಗಾಗಲೇ ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮುಜುಗರವನ್ನು ಅನುಭವಿಸಿದೆ. ಇನ್ನು 6 ತಿಂಗಳಲ್ಲಿ ಚುನಾವಣೆ ಇರುವುದರಿಂದ ಭಾರೀ ಮುಜುಗರದಿಂದ ತಪ್ಪಿಸಿಕೊಳ್ಳಲು ಸತ್ಯನಾರಾಯಣ್ ರಾವ್’ರವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲು ಚಿಂತನೆ ನಡೆಸಿದೆ.

ಸತ್ಯನಾರಾಯಣ್ ರಾವ್’ರವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲು ಸರಕಾರ ಅವಲೋಕನ ನಡೆಸುತ್ತಿದ್ದು, ಈ ತಿಂಗಳ ಕೊನೆಯಲ್ಲಿ ಅವರ ಸೇವೆ ಕೊನೆಗೊಳ್ಳಲಿದೆ. ಒಂದು ವೇಳೆ ಅಧಿಕಾರಿಯು ನಿವೃತ್ತಿ ವಯಸ್ಸಿಗೆ ಬಂದಿದ್ದರೆ ಇಲಾಖಾ ತನಿಖೆಯನ್ನು ತಪ್ಪಿಸಿಕೊಳ್ಳಬಹುದು. ಅವರ ನಿವೃತ್ತಿ ನಂತರದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಒಂದು ವೇಳೆ ಅಮಾನತುಗೊಂಡ ಅವಧಿಯಲ್ಲಿ ನಿವೃತ್ತರಾದರೆ ಅವರು ತನಿಖೆಯನ್ನು ಎದುರಿಸಬೇಕಾಗಬಹುದು. ಅವರ ನಿವೃತ್ತಿಯ ನಂತರದ ಬೆನಿಫಿಟ್’ಗಳನ್ನು ತಡೆ ಹಿಡಿಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸತ್ಯನಾರಾಯಣ್ ರಾವ್’ರವರನ್ನು ಸಂಪರ್ಕಿಸಲು ಮಾಧ್ಯಮಗಳು ಪ್ರಯತ್ನಿಸಿದ್ದು, ಅವರು ಪ್ರತಿಕ್ರಿಯಿಸಲು ನಿರಾಕರಿಸಿಸದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!