ರಾತ್ರೋ ರಾತ್ರಿ ಫೋಯಸ್ ಗಾರ್ಡನ್'ಲ್ಲಿ ತುರ್ತು ಸಭೆ: ಪಕ್ಷದ ಖಜಾಂಚಿ ಹುದ್ದೆಯಿಂದ ಪನ್ನೀರ್ ಸೆಲ್ವಂಗೆ ಗೇಟ್ ಪಾಸ್

Published : Feb 08, 2017, 03:02 AM ISTUpdated : Apr 11, 2018, 12:41 PM IST
ರಾತ್ರೋ ರಾತ್ರಿ ಫೋಯಸ್ ಗಾರ್ಡನ್'ಲ್ಲಿ  ತುರ್ತು ಸಭೆ: ಪಕ್ಷದ ಖಜಾಂಚಿ ಹುದ್ದೆಯಿಂದ ಪನ್ನೀರ್ ಸೆಲ್ವಂಗೆ ಗೇಟ್ ಪಾಸ್

ಸಾರಾಂಶ

ಪನ್ನೀರ್ ಸೆಲ್ವಂ ಹೊಸ ಬಾಂಬ್ ಸಿಡಿಸುತ್ತಿದ್ದಂತೆ ತಮಿಳುನಾಡು ರಾಜಕಾರಣದಲ್ಲಿ ಕ್ಷಣಕ್ಕೊಂದು ಮಹತ್ತರವಾದ ಬೆಳವಣಿಗೆಗೆಳು ನಡೆಯುತ್ತಿವೆ. ರಾತ್ರೋ ರಾತ್ರಿ ಚೆನ್ನೈನ ಫೋಯಸ್ ಗಾರ್ಡನ್'ನಲ್ಲಿ   ತುರ್ತು ಸಭೆ ನಡೆಸಿದ ಶಶಿಕಲಾ ನಟರಾಜನ್ ಪಕ್ಷದ ಖಜಾಂಚಿ ಹುದ್ದೆಯಿಂದ ಪನ್ನೀರ್ ಸೆಲ್ವಂಗೆ ಗೇಟ್ ಪಾಸ್ ನೀಡಿದ್ದಾರೆ. 

ಚೆನ್ನೈ(ಫೆ.08): ಪನ್ನೀರ್ ಸೆಲ್ವಂ ಹೊಸ ಬಾಂಬ್ ಸಿಡಿಸುತ್ತಿದ್ದಂತೆ ತಮಿಳುನಾಡು ರಾಜಕಾರಣದಲ್ಲಿ ಕ್ಷಣಕ್ಕೊಂದು ಮಹತ್ತರವಾದ ಬೆಳವಣಿಗೆಗೆಳು ನಡೆಯುತ್ತಿವೆ. ರಾತ್ರೋ ರಾತ್ರಿ ಚೆನ್ನೈನ ಫೋಯಸ್ ಗಾರ್ಡನ್'ನಲ್ಲಿ   ತುರ್ತು ಸಭೆ ನಡೆಸಿದ ಶಶಿಕಲಾ ನಟರಾಜನ್ ಪಕ್ಷದ ಖಜಾಂಚಿ ಹುದ್ದೆಯಿಂದ ಪನ್ನೀರ್ ಸೆಲ್ವಂಗೆ ಗೇಟ್ ಪಾಸ್ ನೀಡಿದ್ದಾರೆ. 

ಪಕ್ಷದ ನೂತನ ಖಜಾಂಚಿಯಾಗಿ ಡಿ. ಶ್ರೀನಿವಾಸನ್‌ ಅವರನ್ನು ನೇಮಿಸಲಾಗಿದೆ. ಶಶಿಕಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಘೋಷಣೆ ಮಾಡಲಾಗಿದೆ. ಪನ್ನೀರ್ ಸೆಲ್ವಂ ಶಶಿಕಲಾ ನಟರಾಜನ್ ವಿರುದ್ಧ ಸಿಡಿದೇಳುತ್ತಿದ್ದಂತೆ ವಿಪಕ್ಷಗಳಾದ ಡಿಎಂಕೆ, ಕಾಂಗ್ರೆಸ್ ಪನ್ನೀರ್ ಗೆ ಬೆಂಬಲ ನೀಡುವ ಸಾಧ್ಯತೆ ಬಗ್ಗೆ ಮಾತನಾಡುತ್ತಿವೆ.

ತಮಿಳುನಾಡಿನ ರಾಜಕೀಯ ಅಸ್ಥಿರತೆಗೆ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಇನ್ನೊಂದೆಡೆ ಮುಂಬೈನಲ್ಲಿದ್ದ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ತಮಿಳುನಾಡಿಗೆ ಆಗಮಿಸಿಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ